Breaking News

ಕೊರೊನಾಗೆ ಕಡಿವಾಣ ಹಾಕಲು ಕೇಂದ್ರದ ‘3ಟಿ’ ಸೂತ್ರ

Spread the love

ನವದೆಹಲಿ: ದೇಶದಲ್ಲಿ ಕೊರೊನಾ ಅಬ್ಬರ ಮತ್ತೆ ಆರಂಭವಾಗಬಹುದು ಅನ್ನುವ ಆತಂಕ ಕೆಲವೆಡೆ ಮನೆ ಮಾಡಿದೆ. ಈ ಹಿನ್ನಲೆ ಕೊರೊನಾ ಸೋಂಕಿನ ಹರಡುವಿಕೆಗೆ ಕಡಿವಾಣ ಹಾಕೋಕೆ ‘ಟೆಸ್ಟ್‌, ಟ್ರ್ಯಾಕ್‌, ಟ್ರೀಟ್‌’ ಎಂಬ ಮಂತ್ರವನ್ನು ಪಾಲಿಸಿ ಎಂದು 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಹರಿಯಾಣ, ಆಂಧ್ರಪ್ರದೇಶ, ಒಡಿಶಾ, ಗೋವಾ, ಹಿಮಾಚಲ, ಉತ್ತರಾಖಂಡ, ದೆಹಲಿ ಮತ್ತು ಚಂಡೀಘಡದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಹೆಚ್ಚು ಪರೀಕ್ಷೆ ನಡೆಸಿ, ಲಸಿಕೆ ನೀಡುವ ಪ್ರಮಾಣವನ್ನೂ ಹೆಚ್ಚಿಸುವಂತೆ ಕೇಂದ್ರ ಸೂಚಿಸಿದೆ. ದೇಶದಲ್ಲಿ ವೃದ್ದಿಯಾಗುತ್ತಿರುವ ಕೊರೊನಾ ಸಂಖ್ಯೆಯನ್ನು ತಗ್ಗಿಸಲು ಕೇಂದ್ರ ಸರ್ಕಾರ ಈ ರೀತಿಯ ಸೂಚನೆಗಳನ್ನು ರವಾನೆ ಮಾಡಿದೆ.


Spread the love

About Laxminews 24x7

Check Also

ಮಹೇಶ್ ಶೆಟ್ಟಿ ತಿಮರೋಡಿ ಕರೆತರುವಾಗ ಪೊಲೀಸ್​ ಕರ್ತವ್ಯಕ್ಕೆ ಅಡ್ಡಿ; ಮೂವರು ಬೆಂಗಲಿಗರ ಬಂಧನ

Spread the loveಉಡುಪಿ: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವಾಗ ವಾಹನಗಳನ್ನು ಹಿಂಬಾಲಿಸಿಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ