Breaking News

ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿ……..

Spread the love

ಬೆಂಗಳೂರು: ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು. ಬೀದರ್ ನಲ್ಲಿ ತೀವ್ರ ಉಸಿರಾಟದ ತೊಂದರೆಯಿಂದ 82 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇಂದು 9 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ತುಮಕೂರು 2, ವಿಜಯಪುರದಲ್ಲಿ 2, ಬೆಳಗಾವಿ, ಬೆಂಗಳೂರು, ಬಾಗಲಕೋಟೆ, ಚಿಕ್ಕಬಳ್ಳಾಪುರದದಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಅಸಓಅಂಕು ಪೀಡಿತರ ಸಂಖ್ಯೆ 598ಕ್ಕೆ ಏರಿದೆ.

ಬೆಳಗಾವಿಯಲ್ಲಿ 23 ವರ್ಷದ ಯುವಕನಿಗೆ ಸೋಂಕು ತಗುಲಿದ್ದು, ತಬ್ಲಿಗಿ ಸಂಪರ್ಕದಿಂದ ಯುವಕನಿಗೆ ಕೊರೊನಾ ತಗುಲಿದೆ ಎಂದು ತಿಳಿದುಬಂದಿದೆ.

ವಿಜಯಪುರದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇಂದು 22 ವರ್ಷದ ಯುವಕ ಹಾಗೂ 55 ವರ್ಷದ ಪುರುಷರ ನಲ್ಲಿ ಕಾಣಿಸಿಕೊಂಡಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ