Breaking News
Home / ಜಿಲ್ಲೆ / ಕೊಡಗು / ಕೊರೊನಾ ಆತಂಕ ಮಧ್ಯೆ ಕೊಡಗು, ಹಾಸನದಲ್ಲಿ ಲಘು ಭೂಕಂಪನ

ಕೊರೊನಾ ಆತಂಕ ಮಧ್ಯೆ ಕೊಡಗು, ಹಾಸನದಲ್ಲಿ ಲಘು ಭೂಕಂಪನ

Spread the love

ಹಾಸನ/ಕೊಡಗು: ಕೊರೊನಾ ಆತಂಕದ ನಡುವೆ ಕೊಡಗು ಮತ್ತು ಹಾಸನ ಜಿಲ್ಲೆಯ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿದೆ.

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿ ಜನ ಭಯಭೀತರಾಗಿದ್ದಾರೆ. ಕಾಳೇನಹಳ್ಳಿ, ಗರುಡನಹಳ್ಳಿ ಸುತ್ತಮುತ್ತಲಿನ ಗ್ರಾಮದಲ್ಲಿ ಭೂಮಿ ಕಂಪನದ ಅನುಭವವಾಗಿದೆ. ಇಂದು ಸಂಜೆ 5.20ರ ಸಮಯದಲ್ಲಿ ಭೂಮಿ ಕಂಪಿಸಿ ನಡುಗಿದ ಅನುಭವವಾಗಿದ್ದು, ಬೆಚ್ಚಿಬಿದ್ದ ಜನ ಮನೆಯಿಂದ ಹೊರ ಓಡಿ ಬಂದಿದ್ದಾರೆ.

ಕೊಡಗು ಜಿಲ್ಲೆಯ ಕುಶಾಲನಗರ, ಕೂಡಿಗೆ, ಹೆಬ್ಬಾಲೆ ಸೇರಿದಂತೆ ಹಲವೆಡೆ ಭೂಮಿ ಕಂಪಿಸಿರುವ ಅನುಭವವಾಗಿದೆ.ಕೊರೊನಾ ಭೀತಿಯ ನಡುವೆ ಭೂಮಿ ಕಂಪಿಸಿರುವುದು ಸ್ಥಳೀಯರಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ. ಅಲ್ಲದೇ ಮೈಸೂರು-ಹಾಸನ ಭಾಗವಾದ ಕೆ.ಆರ್.ನಗರ, ಅರಕಲಗೂಡು ವ್ಯಾಪ್ತಿಯಲ್ಲಿ ಲಘು ಭೂಕಂಪನದ ಅನುಭವಾಗಿದೆ. ಸಂಜೆ 5.30ಕ್ಕೆ ಹಾರಂಗಿ, ಬೆಂಗಳೂರು ಸಿಸ್ಮೋಗ್ರಾಫ್ ಕೇಂದ್ರಗಳಲ್ಲಿ 2.6ರ ತೀವ್ರತೆ ದಾಖಲಾಗಿದೆ ಎಂದು ಆಣೆಕಟ್ಟು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ