Home / ಜಿಲ್ಲೆ / ಕರೋನಾ : ಸರ್ಕಾರದ ಆದೇಶಕ್ಕೂ ಕ್ಯಾರೇ ಅನ್ನದ ಧನದಾಹಿ ಶಿಕ್ಷಣ ಸಂಸ್ಥೆಗಳು.

ಕರೋನಾ : ಸರ್ಕಾರದ ಆದೇಶಕ್ಕೂ ಕ್ಯಾರೇ ಅನ್ನದ ಧನದಾಹಿ ಶಿಕ್ಷಣ ಸಂಸ್ಥೆಗಳು.

Spread the love

ಕರೋನಾ : ಸರ್ಕಾರದ ಆದೇಶಕ್ಕೂ ಕ್ಯಾರೇ ಅನ್ನದ ಧನದಾಹಿ ಶಿಕ್ಷಣ ಸಂಸ್ಥೆಗಳು..!

ಬೆಂಗಳೂರು, ಮಾ.14- ಇಡೀ ರಾಜ್ಯವೇ ಕೊರೊನಾ ಭೀತಿ ಆತಂಕ ಎದುರಿಸುತ್ತಿದೆ. ಆದರೆ, ಧನದಾಹಿ ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಶುಲ್ಕ ವಸೂಲಿಯಲ್ಲಿ ತೊಡಗಿವೆ.  1 ರಿಂದ 6ನೆ ತರಗತಿವರೆಗೆ ಬೇಸಿಗೆ ರಜೆ ಘೋಷಣೆ ಮಾಡಬೇಕೆಂದು ಸರ್ಕಾರ ಆದೇಶ ನೀಡಿದೆ. ಆದರೆ, ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಇನ್ನೂ ಪರೀಕ್ಷೆ ನಡೆದಿರಲಿಲ್ಲ. ಪ್ರವೇಶ ಪತ್ರ ಕೊಡುವ ನೆಪದಲ್ಲಿ ಶುಲ್ಕ ವಸೂಲಿ ಮಾಡುತ್ತಿದ್ದ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರದ ಈ ಆದೇಶದಿಂದ ಅನಾನುಕೂಲವಾಗಿದೆ.

ಹಾಗಾಗಿ ಕೆಲವೆಡೆ ರಜೆಯನ್ನೂ ಘೋಷಿಸದೆ ಶಾಲೆಗೆ ಬರುವಂತೆ ಸೂಚಿಸಿರುವ ಘಟನೆಗಳು ಕಂಡುಬಂದಿವೆ. ಮುಂದಿನ ತರಗತಿಗೆ ಬಡ್ತಿ ನೀಡಬೇಕಾದರೆ ಎಲ್ಲ ಶುಲ್ಕವನ್ನೂ ಪಾವತಿಸಬೇಕಾಗುತ್ತದೆ. ಇಲ್ಲದಿದ್ದರೆ ಕಷ್ಟವಾಗುತ್ತದೆ ಎಂದು ಹಲವು ಶಾಲೆಗಳ ಮುಖ್ಯಸ್ಥರು ಪೋಷಕರಿಗೆ ಮೆಸೇಜ್ ರವಾನಿಸಿದ್ದಾರೆ.

ಈಗಾಗಲೇ 1 ರಿಂದ 6ರ ವರೆಗೆ ಈ ಹಿಂದೆ ನಡೆದ ಟೆಸ್ಟ್‍ಗಳನ್ನು ಆಧರಿಸಿ ಫಲಿತಾಂಶ ನೀಡಬೇಕೆಂದು ಸರ್ಕಾರ ಆದೇಶಿಸಿದ್ದರೂ ಹಲವೆಡೆ ಸರ್ಕಾರದ ಆದೇಶವನ್ನೂ ಲೆಕ್ಕಿಸದೆ 6ನೆ ತರಗತಿಯ ಮಕ್ಕಳಿಗೂ ಪರೀಕ್ಷೆ ನಡೆಸುತ್ತಿರುವುದು ಕಂಡುಬಂದಿದೆ. ಇದು ಶುಲ್ಕ ವಸೂಲಿ ದಂಧೆಯ ಕರಾಳ ಮುಖವಾಡವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ