Breaking News
Home / ಜಿಲ್ಲೆ / ಕೊರೊನಾ ತುರ್ತು ಪರಿಸ್ಥಿತಿಯನ್ನೇ ಬಂಡವಾಳ ಮಾಡ್ಕೊಂಡ್ರೆ ಜೈಲಿಗೆ ಕಳಿಸ್ತೀವಿ’

ಕೊರೊನಾ ತುರ್ತು ಪರಿಸ್ಥಿತಿಯನ್ನೇ ಬಂಡವಾಳ ಮಾಡ್ಕೊಂಡ್ರೆ ಜೈಲಿಗೆ ಕಳಿಸ್ತೀವಿ’

Spread the love

ಬೀದರ್: ಕೊರೊನಾ ತುರ್ತು ಪರಿಸ್ಥಿತಿಯನ್ನು ಉಪಯೋಗಿಸಿಕೊಂಡು ಲಾಭ ಮಾಡಲು ಹೊರಟರೆ ಮುಲಾಜಿಲ್ಲದೆ ಜೈಲಿಗೆ ಕಳುಹಿಸುವುದಾಗಿ ಜಿಲ್ಲಾಧಿಕಾರಿ ಫಾರ್ಮಸಿ ಅಂಗಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಎಚ್.ಆರ್ ಮಹಾದೇವ, ವಿಶ್ವದಾದ್ಯಂತ ಕೊರೊನಾ ವೃಸ್ ಭೀತಿ ಹೆಚ್ಚಾಗುತ್ತಿದೆ. ಇದರಿಂದ ತಪ್ಪಿಸಿಕೊಳ್ಳಬೇಕು ಅಂತ ಎಲ್ಲರೂ ಮಾಸ್ಕ್ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ಕೆಲ ಫಾರ್ಮಸಿ ಅಂಗಡಿಗಳು ಮಾಸ್ಕ್ ಗೆ ದುಪ್ಪಟ್ಟು ಹಣ ಪಡೆಯುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಯಾರಾದರೂ ಈ ಪರಿಸ್ಥಿತಿಯನ್ನ ದುರ್ಬಳಕೆ ಮಾಡಿಕೊಂಡು ಡಬಲ್ ರೇಟಿಗೆ ಮಾಸ್ಕ್ ಮಾರಿದ್ದು ಕಂಡು ಬಂದ್ರೆ ಅವರನ್ನ ಜೈಲಿಗೆ ಕಳಿಸುವುದಾಗಿ ತಿಳಿಸಿದ್ದಾರೆ.

ಕೊರೊನಾ ವೈರಸನ್ನೇ ಬಂಡವಾಳ ಮಾಡಿಕೊಂಡು ಹೆಚ್ಚಿನ ಬೆಲೆ ಮಾಸ್ಕ್ ಮಾರಾಟ ಮಾಡಿದರೆ ಕೂಡಲೇ ನನ್ನ ಗಮನಕ್ಕೆ ತನ್ನಿ. ನಾನು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇನೆ. ಈಗಾಗಲೇ ನಮ್ಮ ಜಿಲ್ಲೆಗೆ ವಿದೇಶದಿಂದ 126 ಜನ ಬಂದಿದ್ದಾರೆ. ಅವರನ್ನು ಮನೆಯಿಂದಾನೆ ನಮ್ಮ ಸಿಬ್ಬಂದಿ ನಿಗಾ ವಹಿಸಿದ್ದಾರೆ. ಇನ್ನೂ 300 ಜನ ವಿದೇಶದಿಂದ ಬರಲಿದ್ದಾರೆ ಎಂಬ ಮಾಹಿತಿ ಇದೆ. ಹೀಗಾಗಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಸಿದ್ಧವಿದೆ. ಹಳ್ಳಿ-ಹಳ್ಳಿಗಳಲ್ಲಿ ಈಗಾಗಾಲೇ ಕೊರೊನಾ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ 6 ಬೆಂಗಾವಲು ಪಡೆಗಳು ಕಾರ್ಯನಿರ್ವಸುತ್ತಿವೆ ಎಂದು ತಿಳಿಸಿದರು.


Spread the love

About Laxminews 24x7

Check Also

ಸಾರ್ವಜನಿಕ ಆಸ್ತಿ ಮಾರಿದ್ದೇ ಮೋದಿ ಸಾಧನೆ: ಖರ್ಗೆ ಟೀಕೆ

Spread the love ನವದೆಹಲಿ: ‘ದೇಶದಲ್ಲಿನ ಸಾರ್ವಜನಿಕ ಆಸ್ತಿಗಳನ್ನು ತನ್ನ ಬಂಡವಾಳಶಾಹಿ ಸ್ನೇಹಿತರಿಗೆ ಅತಿ ಕಡಿಮೆ ಬೆಲೆಗೆ ಮಾರಾಟ ಮಾಡಿರುವುದೇ ಪ್ರಧಾನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ