Breaking News

ಹೊರ ರಾಜ್ಯದಲ್ಲಿರುವ ಕನ್ನಡಿಗರು ರಾಜ್ಯಕ್ಕೆ ಬರಬಹುದು – ಷರತ್ತುಗಳು ಅನ್ವಯ

Spread the love

ಬೆಂಗಳೂರು: ಹೊರ ರಾಜ್ಯದಲ್ಲಿರುವ ಕನ್ನಡಿಗರು ಇನ್ನು ಮುಂದೆ ಕರ್ನಾಟಕಕ್ಕೆ ಬರಬಹುದು. ಲಾಕ್‍ಡೌನ್ ಘೋಷಣೆಗೂ ಮುನ್ನ ನೆರೆ ರಾಜ್ಯಕ್ಕೆ ಹೋಗಿರುವ ಕನ್ನಡಿಗರು ಪಾಸ್ ಪಡೆಯುವ ಮೂಲಕ ಮರಳಿ ಕರ್ನಾಟಕಕ್ಕೆ ಬರಬಹುದು.

ರಾಜ್ಯಕ್ಕೆ ಬರುವ ಕನ್ನಡಿಗರು ಸೇವಾ ಸಿಂಧು ವೆಬ್‍ಸೈಟ್‍ಗೆ ತೆರಳಿ ವಿವರಗಳನ್ನು ನೀಡಬೇಕಾಗುತ್ತದೆ. ಈ ಎಲ್ಲ ವಿವರಗಳು ಸರಿಯಾಗಿದ್ದರೆ ಇ ಪಾಸ್ ಡೌನ್‍ಲೋಡ್ ಮಾಡಬಹುದು.

ಇ ಪಾಸ್ ಸಿಕ್ಕಿದ ದಿನದಿಂದ ಒಂದು ವಾರದ ವರೆಗೆ ಮಾತ್ರ ಈ ಪಾಸ್ ಉರ್ಜಿತದಲ್ಲಿರುತ್ತದೆ. ಸ್ವಂತ ವಾಹನ, ಬಾಡಿಗೆ ವಾಹನ ಅಥವಾ ಬಸ್ ಇವುಗಳ ಮೂಲಕ ಬರಬಹುದು.

ವಾಹನದಲ್ಲಿ ಬರಬೇಕಾದರೆ ಸಾಮಾಜಿಕ ಅಂತರ ಕಾಪಾಡಿಕೊಂಡು ಕುಳಿತುಕೊಳ್ಳಬೇಕು. ಒಂದು ಕಾರಿನಲ್ಲಿ ಗರಿಷ್ಟ 3 ಮಂದಿ, ಎಸ್‍ಯುವಿ ವಾಹನದಲ್ಲಿ 5, ವ್ಯಾನ್ ನಲ್ಲಿ 10 ಮಂದಿ, ಬಸ್ ನಲ್ಲಿ ಗರಿಷ್ಟ 25 ಮಂದಿ ಪ್ರಯಾಣಿಸಬಹುದು.

ಯಾವ ಚೆಕ್ ಪೋಸ್ಟ್ ಮೂಲಕ ಅನುಮತಿ ನೀಡಲಾಗಿದೆಯೋ ಆ ಚೆಕ್ ಪೋಸ್ಟ್ ಮೂಲಕ ಮಾತ್ರ ಪ್ರವೇಶ ನೀಡಲಾಗುತ್ತದೆ.

ವೆಬ್‍ಸೈಟಿಗ್ ಭೇಟಿ ನೀಡಲು ಕ್ಲಿಕ್ ಮಾಡಿ:  www.sevasindhu.karnataka.gov.in/


Spread the love

About Laxminews 24x7

Check Also

ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಕೇಂದ್ರಕ್ಕೆ ಪತ್ರ: ಪರಮೇಶ್ವರ್‌

Spread the loveಬೆಂಗಳೂರು: ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ  ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ವಾಪಸ್‌ ಕರೆದುಕೊಂಡು ಬರಲು ಕೇಂದ್ರ ಸರ್ಕಾರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ