Breaking News

ಚಿಕ್ಕೋಡಿ:ಮಹಾಮಾರಿ ಕೊರೊನಾ ವೈರಸ್ ಗ್ರಾಮೀಣ ಭಾಗಕ್ಕೂ ವಕ್ಕರಿಸಿದೆ.

Spread the love

ಬೆಳಗಾವಿ/ಚಿಕ್ಕೋಡಿ: ಮಹಾಮಾರಿ ಕೊರೊನಾ ವೈರಸ್ ಗ್ರಾಮೀಣ ಭಾಗಕ್ಕೂ ವಕ್ಕರಿಸಿದೆ. ಜಿಲ್ಲೆಯ ಕಾಗವಾಡ ತಾಲೂಕಿನ ಮೊಳವಾಡ, ಹುಕ್ಕೇರಿ ತಾಲೂಕಿನ ದೊಂಡಗಟ್ಟಿ ಹಾಗೂ ಮೊದಗಾ ಗ್ರಾಮದವರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.

ಮೊಳವಾಡ ಗ್ರಾಮದ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಹುಕ್ಕೇರಿ ಇಬ್ಬರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ದೊಂಡಗಟ್ಟಿ ಹಾಗೂ ಮೊದಗಾ ಗ್ರಾಮದ ತಲಾ ಒಬ್ಬ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ.

ಲಾಕ್‍ಡೌನ್‍ಗೂ ಮುನ್ನವೇ ಮೊಳವಾಡ ಗ್ರಾಮದ 15 ಜನರ ತಂಡ ಉತ್ತರ ಭಾರತದ ಜೈನ್ ದೇವಸ್ಥಾನಗಳಿಗೆ ಪ್ರವಾಸಕ್ಕೆ ತೆರಳಿದ್ದರು. ಲಾಕ್‍ಡೌನ್ ಸಡಿಲಿಕೆ ಬಳಿಕ ಗ್ರಾಮಕ್ಕೆ ವಾಪಸ್ಸಾಗಿದ್ದು, ಗ್ರಾಮಕ್ಕೆ ಬರುತ್ತಿದ್ದಂತೆ ಯಾತ್ರಾರ್ಥಿಗಳನ್ನ ಶಿರಗುಪ್ಪಿ ಗ್ರಾಮದ ಸರ್ಕಾರಿ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಇನ್ನೂ ಮುಂಬೈ ನಗರದಿಂದ ಹುಕ್ಕೇರಿ ತಾಲೂಕಿನ ಮೊದಗಾ ಹಾಗೂ ದೊಂಡಗಟ್ಟಿಯ ಗ್ರಾಮಕ್ಕೆ ವಾಪಸ್ಸಾಗಿದ್ದ ಮಹಿಳೆಯರನ್ನ ಸರ್ಕಾರಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ