Breaking News

ರಾಜ್ಯದ ಗಡಿಯಲ್ಲಿ ಕಾಯುವ ಕೊರೊನಾ ವಾರಿಯರ್ಸ್‍ಗೆ ಭಯ, ಆತಂಕ ಎದುರಾಗಿದೆ.

Spread the love

ಕೋಲಾರ: ಕೊರೊನಾ ಸೋಂಕು ಹರಡದಂತೆ ಹಗಲಿರುಳು ರಾಜ್ಯದ ಗಡಿಯಲ್ಲಿ ಕಾಯುವ ಕೊರೊನಾ ವಾರಿಯರ್ಸ್‍ಗೆ ಭಯ, ಆತಂಕ ಎದುರಾಗಿದೆ. ಗಡಿ ಜಿಲ್ಲೆ ಕೋಲಾರಕ್ಕೆ ನೆರೆ ಯ ಆಂಧ್ರ ಪ್ರದೇಶ ಹಾಗೂ ತಮಿಳುನಾಡು ಕಂಟಕವಾಗಿದ್ದು, ಕೊರೊನಾ ವಾರಿಯರ್ಸ್‍ಗೆ ಯಾವುದೇ ಸುರಕ್ಷತೆ ಇಲ್ಲದಂತಾಗಿದೆ.

ಆಂಧ್ರ ಹಾಗೂ ತಮಿಳುನಾಡು ಗಡಿಯಲ್ಲಿ ಹಗಲಿರುಳು ಕೆಲಸ ಮಾಡುವ ಸಿಬ್ಬಂದಿಗೆ ಸುರಕ್ಷತೆ ಇಲ್ಲದಂತಾಗಿದೆ. ಸಿಬ್ಬಂದಿ ಮಾಸ್ಕ್ ಮಾತ್ರ ಧರಿಸಿ ಕೆಲಸ ಮಾಡುತ್ತಿದ್ದು, ಹ್ಯಾಂಡ್ ಗ್ಲೌಸ್, ಪಿಪಿಇ ಕಿಟ್ ಇಲ್ಲದೆ ಭಯದಲ್ಲೇ ಕೆಲಸ ಮಾಡುತ್ತಿದ್ದಾರೆ. ಗಡಿಯಲ್ಲಿ ಕೇಕೆ ಹಾಕುತ್ತಿರುವ ಕಿಲ್ಲರ್ ಕೊರೊನಾ, ಜಿಲ್ಲೆಯಲ್ಲೂ ತನ್ನ ಅಟ್ಟಹಾಸ ಮುಂದುವರೆಸಿದೆ. ಕೋಲಾರದ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರಿನ ಮುಳಬಾಗಲು ತಾಲೂಕಿನ ನಂಗಲಿ ಚೆಕ್ ಪೋಸ್ಟ್, ವಿಕೋಟ ಕೆಜಿಎಫ್ ತಾಲೂಕಿನ ವೆಂಕಟಾಪುರ ಚೆಕ್ ಪೋಸ್ಟ್, ಕುಪ್ಪಂನ ಕೆಂಪಾಪುರ ಚೆಕ್ ಪೋಸ್ಟ್, ಶ್ರೀನಿವಾಸಪುರ ತಾಲೂಕಿನ ರಾಯಲಪಾಡು ಚೆಕ್ ಪೋಸ್ಟ್ ಗಳಲ್ಲಿ 10ಕ್ಕೂ ಹೆಚ್ಚು ಜನ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿಗೆ ಸಂಪರ್ಕ ಕಲ್ಪಿಸುವ ಬಂಗಾರಪೇಟೆ ತಾಲೂಕಿನ ಬಲಮಂದೆ ಚೆಕ್ ಪೋಸ್ಟ್, ಹೊಸೂರು ಸಂಪರ್ಕ ಕಲ್ಪಿಸುವ ಮಾಲೂರು ತಾಲೂಕಿನ ಕೆಸರಗೆರೆ ಹಾಗೂ ಸಂಪಂಗೆರೆ ಚೆಕ್ ಪೋಸ್ಟ್ ನಲ್ಲಿ ಪೊಲೀಸ್, ಅರೋಗ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಆದರೆ ಯಾವುದೇ ಮುನ್ನಚ್ಚರಿಕೆ ಆಕ್ರಮಗಳನ್ನ ಕೈಗೊಳ್ಳದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಗಡಿಯಲ್ಲಿ ಕೆಲಸ ಮಾಡುವ ಕೊರೊನಾ ವಾರಿಯರ್ಸ್‍ಗೆ ಸೋಂಕು ತಗುಲಿದರೆ ಗತಿಯೇನು ಎಂಬ ಭಯ ಕಾಡುತ್ತಿದೆ.


Spread the love

About Laxminews 24x7

Check Also

ಕುಡಿಯುವ ನೀರಿನ ಬಗ್ಗೆ ಚರ್ಚೆ: ಅಧಿಕಾರಿಗಳ ಬೆವರಿಳಿಸಿದ ಸಚಿವ ಬೈರತಿ ಸುರೇಶ್

Spread the loveಕೋಲಾರ: ‌ಕುಡಿಯುವ ನೀರಿನ ವಿಚಾರವಾಗಿ ಸರಿಯಾಗಿ ಮಾಹಿತಿ ನೀಡದ ಹಾಗೂ ಸಮಸ್ಯೆ ನೀಗಿಸಲು ಕ್ರಮ ವಹಿಸದ ಅಧಿಕಾರಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ