Breaking News
Home / ಜಿಲ್ಲೆ / ಬೆಂಗಳೂರು / ಕೊರೋನಾ ಜವಾಬ್ದಾರಿ ಆರ್.ಅಶೋಕ್ ಹೆಗಲಿಗೆ

ಕೊರೋನಾ ಜವಾಬ್ದಾರಿ ಆರ್.ಅಶೋಕ್ ಹೆಗಲಿಗೆ

Spread the love

ಬೆಂಗಳೂರು : ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ನಿರ್ವಹಿಸುತ್ತಿರುವ ಬೆಂಗಳೂರು ಕೋವಿಡ್ ಜವಾಬ್ದಾರಿಯನ್ನು ತಾತ್ಕಾಲಿಕವಾಗಿ ಕಂದಾಯ ಸಚಿವ ಆರ್. ಅಶೋಕ್​ ಅವರಿಗೆ ವಹಿಸಲಾಗಿದೆ.

ಕುಟುಂಬ ಸದಸ್ಯರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಸಚಿವ ಡಾ. ಸುಧಾಕರ್ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಹೀಗಾಗಿ ಅವರು ನಿರ್ವಹಿಸುತ್ತಿರುವ ಕೋವಿಡ್ ಜವಾಬ್ದಾರಿಯನ್ನು ಸುಧಾಕರ್ ಕ್ವಾರಂಟೈನ್ ನಿಂದ ವಾಪಸ್ ಬರುವವರೆಗೂ ತಾತ್ಕಾಲಿಕವಾಗಿ ನಿರ್ವಹಿಸುವಂತೆ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೌಖಿಕವಾಗಿ ಸೂಚನೆ ನೀಡಿದ್ದಾರೆ.

ಸುಧಾಕರ್ ಹೋಂ ಕ್ವಾರಂಟೈನ್​ನಲ್ಲಿರುವ ಕಾರಣಕ್ಕೆ ಅವರ ಉಪಸ್ಥಿತಿಯಲ್ಲಿ ನಡೆಯಬೇಕಿರುವ ಬೆಂಗಳೂರು ಕೊರೊನಾ ನಿಯಂತ್ರಣ ಕುರಿತು ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು.

ಸುಧಾಕರ್ ಹಾಜರಾಗಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಕೊರೊನಾ ನಿಯಂತ್ರಣ ವಿಚಾರದಲ್ಲಿ ಯಾವುದೇ ಸಮಸ್ಯೆ ಮತ್ತು ಹಿನ್ನಡೆಯೂ ಆಗಬಾರದು. ಹಾಗಾಗಿ ತಾತ್ಕಾಲಿಕವಾಗಿ ಜವಾಬ್ದಾರಿ ನಿರ್ವಹಿಸಿ, ವಿಡಿಯೋ ಸಂವಾದದ ಮೂಲಕ ಸುಧಾಕರ್ ಸಹಕಾರ ನೀಡಲಿದ್ದಾರೆ.

ಅವರ ಜೊತೆ ಸಮನ್ವಯತೆ ಕಾಯ್ದುಕೊಂಡು ಕೊರೊನಾ ನಿರ್ವಹಣಾ ಜವಾಬ್ದಾರಿ ನಿರ್ವಹಿಸುವಂತೆ ಅಶೋಕ್ ಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ