Breaking News

ರಾಜ್ಯವನ್ನ ಮತ್ತೆ ಕಡೆಗಣಿಸಿದ ಕೇಂದ್ರ?- ಕೊರೊನಾದಿಂದ ತತ್ತರಿಸಿದ ಕರ್ನಾಟಕಕ್ಕೆ ಇಲ್ಲ ಅನುದಾನ

Spread the love

ನವದೆಹಲಿ: ನೆರೆ ಪರಿಹಾರ ವಿಚಾರದಲ್ಲಿ ರಾಜ್ಯವನ್ನು ಕಡೆಗಣಿಸಿದ್ದ ಕೇಂದ್ರ ಸರ್ಕಾರ ಈಗ ಮತ್ತೆ ಅದೇ ಧೋರಣೆ ಮುಂದುವರಿಸಿದೆ. ಕೊರೊನಾ ವೈರಸ್‍ನಿಂದ ತತ್ತರಿಸುತ್ತಿರುವ ಕರ್ನಾಟಕಕ್ಕೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿದಂತೆ ಕಂಡು ಬಂದಿದೆ.

ಕೊರೊನಾ ವೈರಸ್ ಭೀತಿ ಹಿನ್ನೆಲೆ ರಾಜ್ಯಗಳಿಗೆ ನೆರವಾಗುವ ನಿಟ್ಟಿನಲ್ಲಿ ಇಂದು 17,287.08 ಕೋಟಿ ಹಣವನ್ನು ಕೇಂದ್ರ ಹಣಕಾಸು ಇಲಾಖೆ ಬಿಡುಗಡೆ ಮಾಡಿದೆ. ಎಸ್‍ಡಿಆರ್‍ಎಫ್ ಅನುದಾನದ ಅಡಿ 2020-21 ರ ಮೊದಲ ಕಂತಾಗಿ 11,092 ಕೋಟಿ ಹಾಗೂ 15 ನೇ ಹಣಕಾಸು ಆಯೋಗದ ಶಿಫಾರಸು ಹಿನ್ನಲೆ ಆದಾಯ ಕೊರತೆ ಅನುದಾನದ ಅಡಿಯಲ್ಲಿ 6,195 ಕೋಟಿ ಬಿಡುಗಡೆ ಮಾಡಿದೆ.

14 ರಾಜ್ಯಗಳಿಗೆ ಕೇಂದ್ರ ಸರ್ಕಾರ ಈ ಅನುದಾನ ಹಂಚಿಕೆ ಮಾಡಿದೆ. ಆಂಧ್ರಪ್ರದೇಶ, ಅಸ್ಸಾಂ, ಹಿಮಾಚಲ ಪ್ರದೇಶ, ಕೇರಳ, ಮಣಿಪುರ್, ಮೇಘಾಲಯ, ಮಿಜೋರಾಂ, ನಾಗಲ್ಯಾಂಡ್, ಪಂಜಾಬ್, ಸಿಕ್ಕಿಂ, ತಮಿಳುನಾಡು, ತ್ರಿಪುರ, ಉತ್ತರಾಖಂಡ, ಪಶ್ಚಿಮ ಬಂಗಾಳಕ್ಕೆ ಅನುದಾನ ನೀಡಿದೆ. ಈ ಪಟ್ಟಿಯಲ್ಲಿ ಎಲ್ಲೂ ಕರ್ನಾಟಕದ ಹೆಸರು ಉಲ್ಲೇಖಿಸಿಲ್ಲದ ಹಿನ್ನಲೆ ಮೊದಲ ಕಂತಿನ ಅನುದಾನ ಹಂಚಿಕೆಯಲ್ಲಿ ಕರ್ನಾಟಕನ್ನ ಕೇಂದ್ರ ಸರ್ಕಾರ ಕೈ ಬಿಟ್ಟಿತಾ ಎಂಬ ಪ್ರಶ್ನೆ ಎದ್ದಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ