Breaking News

ಹೊಂಗಸಂದ್ರದಲ್ಲಿ ವ್ಯಕ್ತಿಯೊಬ್ಬ ಮನೆ,ಅಂಗಡಿಗಳ ಮುಂದೆ ಉಗುಳುವುದು, ಅನುಮಾನಾಸ್ಪದ

Spread the love

ಬೆಂಗಳೂರು: ಕೊರೊನಾ ಭೀತಿಯ ನಡುವೆಯೇ ಬೆಂಗಳೂರಿನ ಹೊಂಗಸಂದ್ರದಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಓಡಾಡಿ ಜನರಲ್ಲಿ ಮತ್ತಷ್ಟು ಭಯ ಹುಟ್ಟಿಸಿದ್ದಾನೆ.

ಹೊಂಗಸಂದ್ರದ ಕೊರೊನಾ ಪೀಡಿತ ಪ್ರದೇಶ ವಿದ್ಯಾಜ್ಯೋತಿ ನಗರದ ಸುತ್ತಮುತ್ತ ವ್ಯಕ್ತಿ ಓಡಾಟ ನಡೆಸುತ್ತಿದ್ದಾನೆ. ಅಲ್ಲಿ ಈಗಾಗಲೇ 9 ಜನರಿಗೆ ಪಾಸಿಟಿವ್ ಬಂದಿದ್ದು, ಪರಿಣಾಮ ಹೊಂಗಸಂದ್ರ ಸಂಪೂರ್ಣ ಸೀಲ್ ಡೌನ್ ಆಗಿದೆ. ಇದರ ಮಧ್ಯೆ ಈತನ ವರ್ತನೆ ಕಂಡು ಹೊಂಸಂದ್ರದ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ.

ಈ ಅನುಮಾನಸ್ಪದ ವ್ಯಕ್ತಿ ಉಗುಳುವುದು, ಮನೆಗಳ ಮುಂದೆ, ಅಂಗಡಿಗಳ ಮುಂದೆ ಮಲಗುವುದು, ಮನೆಗಳಿಗೆ ಕಲ್ಲು ಎಸೆಯುವುದು ಮಾಡ್ತಿದ್ದಾನೆ. ಮನೆಗಳ ಮುಂದೆ ಮಲಗುವುದು, ಉಗುಳುವುದನ್ನು ಕಂಡು ಬೈದು ಕಳಿಸುವ ಪ್ರಯತ್ನ ಮಾಡಿದ್ರು ಜನ ವಿಫಲರಾಗಿದ್ದಾರೆ.

ಒಟ್ಟಿನಲ್ಲಿ ಕೊರೊನಾ ಭೀತಿ ನಡುವೆ ಈತನಿಗೂ ಕೊರೊನಾ ಇದೆಯಾ ಎಂಬ ಭಯ ಅಲ್ಲಿನ ಜನರಲ್ಲಿ ಮೂಡಿದೆ. ಬಿಹಾರಿ ಕೂಲಿ ಕಾರ್ಮಿಕ ಇರುವ ಏರಿಯಾ ಸುತ್ತಮುತ್ತ ಓಡಾಟ ನಡೆಸುತ್ತಿದ್ದು, ಈತನ ವರ್ತನೆ, ಓಡಾಟದ ಬಗ್ಗೆ ಬಿಬಿಎಂಪಿ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ