Breaking News

ನವದೆಹಲಿ: ಕೊರೊನಾದಿಂದ ಸಾವನ್ನಪ್ಪುವವರ ಪ್ರಮಾಣ ದೇಶದಲ್ಲಿ ಶೇಕಡಾ 3.2ರಷ್ಟಿದೆ ಎಂದು ಕೇಂದ್ರ ಸಚಿವ ಡಾ. ಹರ್ಷವರ್ಧನ್​ ತಿಳಿಸಿದ್ದಾರೆ

Spread the love

ನವದೆಹಲಿ: ಕೊರೊನಾದಿಂದ ಸಾವನ್ನಪ್ಪುವವರ ಪ್ರಮಾಣ ದೇಶದಲ್ಲಿ ಶೇಕಡಾ 3.2ರಷ್ಟಿದೆ ಎಂದು ಕೇಂದ್ರ ಸಚಿವ ಡಾ. ಹರ್ಷವರ್ಧನ್​ ತಿಳಿಸಿದ್ದಾರೆ.

ಇದು ವಿಶ್ವದಲ್ಲೇ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ ಎಂದಿರುವ ಅವರು 14 ದಿನಗಳ ಹಿಂದೆ ಸೋಂಕಿತರು ದ್ವಿಗುಣಗೊಳ್ಳುವ ಪ್ರಮಾಣ 10.5ರಷ್ಟಿತ್ತು. ಈಗ ಸೋಂಕಿತರು ದ್ವಿಗುಣಗೊಳ್ಳಲು 12 ದಿನಗಳು ಬೇಕಾಗುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇಲ್ಲಿಯವರೆಗೆ ಸುಮಾರು 10 ಸಾವಿರ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಲ್ಲಿರುವ ಸೋಂಕಿತರೂ ಬೇಗನೇ ಚೇತರಿಕೆಗೊಳ್ಳುತ್ತಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮೊದಲು ಇಂಡಿಯನ್​ ಕೌನ್ಸಿನ್​ ಆಫ್​ ಮೆಡಿಕಲ್​ ರಿಸರ್ಚ್​ ಇದುವರೆಗೂ ದೇಶದಲ್ಲಿ 10 ಲಕ್ಷ ಮಂದಿಗೆ ಆರ್​ಟಿ-ಪಿಸಿಆರ್ ಪರೀಕ್ಷೆ ಅಂದರೆ ಕೊರೊನಾ ಸೋಂಕಿನ ಪರೀಕ್ಷೆ ಕೈಗೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದೆ. ಮೇ 3ರ ಬೆಳಗ್ಗೆ 9 ಗಂಟೆಯವರೆಗೆ 10,46,450 ಮಂದಿಯ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ ಎಂದು ವರದಿಯೊಂದರಲ್ಲಿ ತಿಳಿಸಿತ್ತು.

ದೇಶದಲ್ಲಿ 130 ಸರ್ಕಾರಿ ಲ್ಯಾಬ್​ಗಳು ಹಾಗೂ 111 ಖಾಸಗಿ ಲ್ಯಾಬ್​ಗಳು ಕೊರೊನಾ ಸೋಂಕು ಪತ್ತೆ ಪರೀಕ್ಷೆ ನಡೆಸಲು ಅನುಮತಿ ಪಡೆದುಕೊಂಡಿವೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ