ನವದೆಹಲಿ: ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ಆಗಲಿದೆ.
ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಇಲ್ಲಿಯವರೆಗಿದ್ದ 6 ತಿಂಗಳ ಶಿಕ್ಷೆಯ ಪ್ರಮಾಣವನ್ನು 7 ವರ್ಷಕ್ಕೆ ಏರಿಸಿದೆ. ದೇಶದ ಹಲವೆಡೆ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.
ಈ ವಾರದಲ್ಲಿ ಬೆಂಗಳೂರಿನ ಪಾದರಾಯನಪುರ, ಮೈಸೂರಿನಲ್ಲಿ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿತ್ತು. ಕಳೆದ ವಾರ ಉತ್ತರ ಪ್ರದೇಶದಲ್ಲೂ ಹಲ್ಲೆ ನಡೆದಿತ್ತು. ಈಗ ಈ ಕೃತ್ಯಗಳಿಗೆ ಕಡಿವಾಣ ಹಾಕಲು ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸಿದೆ.