Breaking News

ನಾಲ್ವರಿಂದ ನಲವತ್ತಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಆತಂಕ………….

Spread the love

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಾಲ್ಕು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರೋದು ಧೃಡವಾಗಿದೆ. ಪರಿಣಾಮ ನಲವತ್ತಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಆತಂಕ ಹೆಚ್ಚಾಗಿದೆ.

ಈಗಾಗಲೇ ಕಾಫಿನಾಡಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಆರು ತಿಂಗಳಿಂದ ಜೈಲಿನಲ್ಲಿದ್ದ ಕೈದಿಗೂ ಕೊರೊನಾ ತಗುಲಿದ್ದು, ಆತನಿಗೆ ಸೋಂಕು ಹೇಗೆ ಬಂತು ಎಂದು ಹುಡುಕಾಡುವಷ್ಟರಲ್ಲಿಯೇ ಜಿಲ್ಲೆಯ ನಾಲ್ವರು ಪೊಲೀಸರಿಗೆ ಕೋವಿಡ್-19 ತಗುಲಿದೆ. ಇದೀಗ ಜಿಲ್ಲಾಡಳಿತತ ಜೊತೆಗೆ ಇತರೆ ಪೊಲೀಸರಿಗೆ ಕೊರೊನಾ ಢವ ಢವ ಶುರುವಾಗಿದೆ.

ಸೋಂಕಿತ ನಾಲ್ವರು ಪೊಲೀಸರು ಜೂ.17 ರಂದು ತರೀಕೆರೆ ಸರ್ಕಾರಿ ಆಸ್ಪತ್ತೆಯಲ್ಲಿ ಕೊರೊನಾ ಸಾಮುದಾಯಿಕ ಪರೀಕ್ಷೆಗೆ ಒಳಗಾಗಿ ಗಂಟಲ ದ್ರವ ನೀಡಿದ್ದರು. ಬಳಿಕ ಜೂ.17 ಹಾಗೂ 18 ರಂದು ಕೆಲಸಕ್ಕೆ ಹಾಜರಾಗಿ, ಮನೆಗೆ ಹೋಗಿದ್ದರು. ಸ್ನೇಹಿತರ ಜೊತೆ ಸೇರಿದ್ದರು. ಅಷ್ಟೆ ಅಲ್ಲದೆ ಜೂ.19 ರಂದು ತರೀಕೆರೆ ಡಿ.ವೈ.ಎಸ್.ಪಿ. ವ್ಯಾಪ್ತಿಯ ಸುಮಾರು 10ಕ್ಕೂ ಹೆಚ್ವು ಪೊಲೀಸ್ ಠಾಣೆಯ 40ಕ್ಕೂ ಹೆಚ್ವು ಪೊಲೀಸ್ ಸಿಬ್ಬಂದಿ, ಅಧಿಕಾರಿಗಳ ಜೊತೆ ಕ್ರೈಂ ಮೀಟಿಂಗ್ ಮಾಡಿದ್ದರು.

ಸಭೆಯಲ್ಲಿ ಪಾಸಿಟಿವ್ ಬಂದಿರೋ ಪೊಲೀಸರು ಸಹ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ. ಸಭೆಯಲ್ಲಿ ಭಾಗಿಯಾಗದ ಬಳಿಕ ಎಲ್ಲ ಪೊಲೀಸರು ತಮ್ಮ ತಮ್ಮ ಠಾಣೆಗಳಿಗೆ ತೆರಳಿ ಕೆಲಸಕ್ಕೆ ಹಾಜರಾಗಿದ್ದಾರೆ. ಈಗ ಈ ನಾಲ್ಕು ಪೊಲೀಸರ ಪಾಸಿಟಿವ್ ಕೇಸ್ ಸುಮಾರು ಹತ್ತು ಠಾಣೆಯ ನಲವತ್ತಕ್ಕೂ ಹೆಚ್ವು ಪೊಲೀಸರಿಗೆ ಭಯ ಹುಟ್ಟಿಸಿದೆ.     


ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

 


Spread the love

About Laxminews 24x7

Check Also

ಮನೆ ಬಳಿ ಪ್ರತ್ಯಕ್ಷವಾದ 15 ಅಡಿ ಉದ್ದದ ಮೊಸಳೆಯನ್ನು ಯುವಕರ ತಂಡ ಹರಸಾಹಸಪಟ್ಟು ಸೆರೆ ಹಿಡಿದು, ಅರಣ್ಯ ಇಲಾಖೆಗೆ ಒಪ್ಪಿಸಿದೆ.

Spread the loveಚಿಕ್ಕೋಡಿ: ತೋಟದ ಮನೆ ಬಳಿ ಬಂದ ಬೃಹತ್​ ಗಾತ್ರದ ಮೊಸಳೆಯನ್ನು ಯುವಕರು ಸೆರೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ