ಕರ್ನಾಟಕದಲ್ಲಿ ಇಂದು ಕೊರೊನಾ ಸೋಂಕಿನಿಂದ 70 ಜನರು ಸತ್ತಿದ್ದಾರೆ ಮತ್ತು ಹೊಸದಾಗಿ 7,606 ಜನರಲ್ಲಿ ಸೋಂಕು ದೃಢಪಟ್ಟಿದೆಯೆಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಸಾಯಂಕಾಲ ಬಿಡುಗಡೆ ಮಾಡಿರುವ ಮಾಹಿತಿಯಿಂದ ಗೊತ್ತಾಗಿದೆ . ಮಹಾಮಾರಿಯಿಂದ ಇದುವರೆಗೆ ಮರಣಿಸಿದವರ ಸಂಖ್ಯೆ ಇಂದು ಹತ್ತು ಸಾವಿರ (10,036) ದಾಟಿದೆ .
ಇಲ್ಲಿಯವರೆಗೆ 7,07,860 ಸೋಂಕು ತಾಕಿಸಿಕೊಂಡವರ ಪೈಕಿ 5,92,084 ಜನ ಗುಣಮುಖರಾಗಿ ಮನೆಗಳಿಗೆ ಹಿಂತಿರುಗಿದ್ದಾರೆ ಮತ್ತು ಉಳಿದ 1,15,776 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ .
ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 18 ಜನ ಬಲಿಯಾಗಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ 3,498 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ . ನಗರದಲ್ಲಿ ಇದುವರೆಗೆ ಸೋಂಕಿಗೆ ತುತ್ತಾದವರ ಸಂಖ್ಯೆ 3,362 ತಲುಪಿದೆ ಮತ್ತು ಸೋಂಕಿತರ ಸಂಖ್ಯೆ 2,85,055 ರಷ್ಟಾಗಿದ್ದು ಅವರಲ್ಲಿ 2,17,122 ಜನರು ಗುಣಮುಖರಾಗಿದ್ದಾರೆ . ಮಿಕ್ಕಿದ 64,570 ಸೋಂಕಿತರು ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ .