ಗೋಕಾಕ: ಸಮೀಪದ ಮರಡಿಮಠ ಗ್ರಾಮದ ಬಳಿಯ ಕೊಣ್ಣೂರು ಪುರಸಭೆ ಕಟ್ಟಡದ ಪಕ್ಕ ಕೊಳೆತ ಸ್ಥಿತಿಯಲ್ಲಿ ಅನಾಮಧೇಯ ಯುವಕನ ಶವ ಪತ್ತೆಯಾಗಿದೆ.
ಕೊಳೆತ ಸ್ಥಿತಿಯಲ್ಲಿರುವುದರಿಂದ ಯುವಕ ಯಾರೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.