ಮೂಡಲಗಿ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ (Naganur) ಪಟ್ಟಣದಲ್ಲಿ ತಾನು ಹೊಡೆದ ಹೊಡೆತಕ್ಕೆ ಪತ್ನಿ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಪತಿಯೂ (husband)
ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.
ಆತ್ಮಹತ್ಯೆ (suicide) ಮಾಡಿಕೊಂಡ ಯುವಕನನ್ನು ನಾಗನೂರು ಪಟ್ಟಣದ ಅರಣ್ಯಸಿದ್ದೇಶ್ವರ ತೋಟದ ನಿವಾಸಿ ಮಹಾಂತೇಶ ಸಿದ್ದಪ್ಪ ಗೂಡೆನ್ನವರ ಎಂದು ಗುರುತಿಸಲಾಗಿದೆ.
ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಾಂತೇಶ, ಬುಧವಾರ ಹೆಂಡತಿಯೊಡನೆ
ಜಗಳವಾಡಿದ್ದಾನೆ. ಈ ವೇಳೆ ಆತ ಹೆಂಡತಿಗೆ ಹೊಡೆದಿದ್ದು, ಆಕೆ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದಾಳೆ.
Laxmi News 24×7