Breaking News

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the love

ದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ.

ನಾಗರತ್ನ (45) ಕೊಲೆಯಾದ ಮಹಿಳೆ. ನಾಗರಾಜ್ (36) ಕೊಲೆ ಆರೋಪಿಯಾಗಿದ್ದಾನೆ. ಈತ ಮಹಿಳೆಯೊಂದಿಗೆ ಹಲವು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಮಹಿಳೆಯನ್ನು ಕೊಲೆಗೈದು ಆರೋಪಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಮಹಿಳೆಯ ಕಿರುಚಾಟ ಕೇಳಿ ಬಂದ ಜನ ಆತನನ್ನು ಹಿಡಿದು ತೆಂಗಿನ ಮರಕ್ಕೆ ಕಟ್ಟಿ ಹಾಕಿದ್ದರು. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ನಾಗರತ್ನ ಪತಿಯನ್ನು ತ್ಯಜಿಸಿ ತನ್ನ ಮೂರು ಮಕ್ಕಳನ್ನು ಬೇರೆ ಕಡೆ ಮನೆ ಮಾಡಿ ಬಿಟ್ಟಿದ್ದಳು. ತಾನು ಒಂಟಿಯಾಗಿ ಜೀವನ ಮಾಡುತ್ತಿದ್ದಳು. ಕಲ್ಯಾಣ ಮಂಟಪದಲ್ಲಿ ಕೆಲಸ ಮಾಡಿಕೊಂಡಿದ್ದ ನಾಗರತ್ನಳಿಗೆ ನಾಗರಾಜ್ ಪರಿಚಯವಾಗಿದ್ದ. ಬಳಿಕ ಆಕೆಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ.

ಕೆಲ ದಿನಗಳಿಂದ ಇಬ್ಬರ ನಡುವೆ ಪದೇ ಪದೇ ಜಗಳವಾಗುತ್ತಿತ್ತು. ಇದರಿಂದ ಸುತ್ತಮುತ್ತಲಿನ ಜನರು ಈಕೆಯನ್ನು ಮನೆ ಖಾಲಿ ಮಾಡಿಕೊಂಡು ಹೋಗುವಂತೆ ಹೇಳಿದ್ದರು. ಅದರೂ ಕೂಡ ಅಲ್ಲೇ ವಾಸ ಮಾಡುತ್ತಿದ್ದಳು.  ಪ್ರಿಯಕರ ನಾಗರಾಜ್, ನಾಗರತ್ನಳನ್ನು ಅವಳ ಮನೆಯ ಮೇಲೆ ಕರೆದೊಯ್ದು ಚಾಕುವಿನಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಆರ್‌ಎಂಸಿ ಯಾರ್ಡ್‌ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ರಾಜ್ಯ ಸರ್ಕಾರ ಮೊದಲು ಬರ ಪರಿಹಾರ ಘೋಷಿಸಿ, ಕೇಂದ್ರಕ್ಕೆ ನಿಯೋಗ ಕೊಂಡೊಯ್ಯಲಿ: ಪಿ.ಸಿ ಮೋಹನ್

Spread the loveಬೆಂಗಳೂರು: ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಜನಹಿತದ ಕಾರ್ಯಕ್ರಮಗಳನ್ನು ಮಾಡುತ್ತಿಲ್ಲ ಎಂದು ಸಂಸದ ಪಿ.ಸಿ ಮೋಹನ್  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ