ಬೆಂಗಳೂರು: ದಿನಪೂರ್ತಿ ದುಡಿದರೂ ಹಸಿವು ನೀಗುವಷ್ಟು ಸಂಪಾದಿಸಲಾಗದಿರುವ ಸಂಕಷ್ಟದಿಂದ ನೊಂದು ಕೆಂಪೇಗೌಡ ಏರ್ಪೋರ್ಟ್ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ನಿನ್ನೆ ಟ್ಯಾಕ್ಸಿ ಚಾಲಕ ಪ್ರತಾಪ್ ಏರ್ಪೋರ್ಟ್ನಲ್ಲಿ ಪೆಟ್ರೋಲ್ ಸುರಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಶೇ.70 ಸುಟ್ಟ ಗಾಯಗಳಿಂದ ಪ್ರತಾಪ್ ಅವರನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಸಾವನ್ನಪ್ಪಿದ್ದಾರೆ.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಏರ್ಪೋರ್ಟ್ನ ಟ್ಯಾಕ್ಸಿ ಚಾಲಕ ಪ್ರತಾಪ್ ಸುಮಾರು ಹತ್ತು ವರ್ಷದಿಂದ ಚಾಲಕನಾಗಿ ಕೆಲಸಮಾಡುತ್ತಿದ್ದರು. ಇತ್ತೀಚಿಗೆ ಪ್ರತಿ ನಿತ್ಯ 300 ರೂಪಾಯಿ ಸಂಪಾದನೆ ಆಗುತ್ತಿತ್ತು ಎನ್ನಲಾಗಿದೆ. ಇದರಿಂದ ಬೇಸರಗೊಂಡ ಪ್ರತಾಪ್, ಏರ್ಪೋರ್ಟ್ ಪಿಕ್ಅಪ್ ಪಾಯಿಂಟ್ನಲ್ಲಿ ಕಾರಿನೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದರು. ಪ್ರತಾಪ್ ಸಾವಿನ ಬೆನಲ್ಲೇ ವಿಕ್ಟೋರಿಯಾ ಮುಂದೆ ಜಮಾಯಿಸಿರುವ ಇತರೇ ಚಾಲಕರು, ಪ್ರತಾಪ್ ಸಾವನ್ನಾದ್ರೂ ನೋಡಿ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.