Breaking News

ನಿಪ್ಪಾಣಿ ಗಾಂಜಾ ಮಾರಾಟ – ಇಬ್ಬರು ಯುವಕರ ಬಂಧನ

Spread the love

 

ನಿಪ್ಪಾಣಿ: ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರು ಸ್ಥಳೀಯ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ನಿಪ್ಪಾಣಿ ಪಟ್ಟಣದ ಬಾದಲ್ ಪ್ಲಾಟ್‍ನ ಸೋಹೆಲ್ ಶಬ್ಬೀರ ದೇಸಾಯಿ(26) ಹಾಗೂ ಶಿವಾಜಿನಗರ ಹಮೀದ ಸಲಮಾನ ಶೇಖ(21) ಬಂಧಿತ ಯುವಕರು. ಬಂಧಿತರಿಂದ ಸುಮಾರು 15 ಸಾವಿರ ಮೌಲ್ಯದ ಒಂದು ಕೆ.ಜಿ ಗೂ ಅಧಿಕ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

 

ಇನ್ನೊಬ್ಬ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸಿದ್ದಾರೆ. ನ್ಯಾಯಾಂಗ ಬಂಧನಕ್ಕಾಗಿ ಇಬ್ಬರನ್ನೂ ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಂಜಾ ಮಾರಟದ ಖಚಿತ ಮಾಹಿತಿ ಆಧಾರದ ಮೇಲೆ ವೃತ್ತ ನಿರೀಕ್ಷಕ ಸಂಗಮೇಶ ಶಿವಯೋಗಿ, ಪಿಎಸ್‍ಐ ಕೃಷ್ಣವೇಣಿ ಗುರ್ಲಹೊಸೂರ ನೇತೃತ್ವದಲ್ಲಿ ಶೇಖರ ಅಸೋದೆ, ಉದಯ ಕಾಂಬಳೆ, ಮೊದಲಾದ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದ್ದಾರೆ. ದಾಳಿ ಕುರಿತು ನಿಪ್ಪಾಣಿ ಶಹರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ