ಚಾಮರಾಜನಗರ: ದೇಗುಲ ದರ್ಶನಕ್ಕೆಂದು ಅಪ್ರಾಪ್ತೆಯನ್ನು ತಿರುಪತಿಗೆ ಕರೆದೊಯ್ದು ರೈಲಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಯುವಕನಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಸದಾಶಿವ ಎಸ್ ಸುಲ್ತಾನಪುರಿ 5 ವರ್ಷ ಸಜೆ ವಿಧಿಸಲು ಆದೇಶಿಸಿದ್ದಾರೆ.
ಗುಂಡ್ಲುಪೇಟೆ ಪಟ್ಟಣ ನಿವಾಸಿ ಕುಮಾರ್ ಅಲಿಯಾಸ್ ಧ್ರುವ(19) ಎಂಬ ಯುವಕ ಶಿಕ್ಷೆಗೊಳಗಾದವ. ಕುಮಾರನು ಕೂಲಿ ಕಾರ್ಮಿಕನಾಗಿದ್ದು, 17 ವರ್ಷದ ಅಪ್ರಾಪ್ತೆಯನ್ನು ಪುಸಲಾಯಿಸಿ ಪ್ರೀತಿಸುವುದಾಗಿ ಪೀಡಿಸಿ ಕೊನೆಗೇ ದೇಗುಲಕ್ಕೆ ಹೋಗೋಣವೆಂದು 2019 ಫೆ.24 ರಂದು ತಿರುಮಲ ತಿರುಪತಿಗೆ ಕರೆದೊಯ್ದಿದ್ದಾನೆ.