Breaking News

ಸ್ನೇಹಿತರ ಜೊತೆಗೂಡಿ ಎಣ್ಣೆ ಪಾರ್ಟಿ.. ಮತ್ತೇರಿದ ಮೇಲೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ..

Spread the love

ಹೊಸಕೋಟೆ (ಬೆಂ.ಗ್ರಾ) : ಅವಾಚ್ಯ ಪದಗಳಿಂದ ನಿಂದಿಸಿದ ಎಂದು ಕುಡಿದ ಅಮಲಿನಲ್ಲಿ ಸ್ನೇಹಿತನನ್ನೆ ಕೊಲೆ ಮಾಡಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕೆ.ಸತ್ಯವಾರ ಗ್ರಾಮದಲ್ಲಿ ನಡೆದಿದೆ.

ಎಣ್ಣೆ ಪಾರ್ಟಿ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಂದು ಸ್ನೇಹಿತರೇ ಸೇರಿ ದೊಣ್ಣೆಯಿಂದ ಹೊಡೆದು ಚಾಕುವಿನಿಂದ ಇರಿದು ಕೊಲೆಗೈದಿದ್ದಾರೆ.

ದಾವಣಗೆರೆ ಮೂಲದ ಸುಧಾಕರ್ (43) ಎಂಬುವರು ಕೊಲೆಯಾಗಿರುವ ದುರ್ದೈವಿ. ಕೆ.ಸತ್ಯವಾರ ಗ್ರಾಮದ ನಾಗಭೂಷಣ್ ಅಲಿಯಾಸ್ ನಾಗ, ಚಂದ್ರಶೇಖರ್ ಅಲಿಯಾಸ್ ಚಂದ್ರು, ಬಾಬು ಅಲಿಯಾಸ್ ಪೈಂಟರ್ ಬಾಬು ಆರೋಪಿಗಳಾಗಿದ್ದಾರೆ.

ಮೃತ ಸುಧಾಕರ್ ಲಾರಿ ಚಾಲಕನಾಗಿದ್ದು, ಸತ್ಯವಾರದಲ್ಲಿ ಏಕಾಂಗಿಯಾಗಿ ವಾಸವಾಗಿದ್ದ. ನಿನ್ನೆ ರಾತ್ರಿ ಆರೋಪಿಗಳ ಜೊತೆ ಎಣ್ಣೆ ಪಾರ್ಟಿ ಮಾಡಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿತ್ತು. ಈ ವೇಳೆ ಅವಾಚ್ಯ ಪದ ಬಳಸಿ ಪರಸ್ಪರ ಬೈದಾಡಿಕೊಂಡಿದ್ದರು.

ಆದರೆ, ಇಷ್ಟಕ್ಕೆ ಸುಮ್ಮನಾಗದ ಹಂತಕರು ಸ್ನೇಹಿತನನ್ನ ಕೊಲೆಗೈದಿದ್ದಾರೆ. ಸ್ಥಳಕ್ಕೆ ನಂದಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.

 


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ