Breaking News

ಮಾಜಿ ಸಚಿವ ವಿನಯ ಕುಲಕರ್ಣಿ-ಚಂದ್ರಶೇಖರ ಇಂಡಿ ನ್ಯಾಯಾಂಗ ಬಂಧನ ವಿಸ್ತರಣೆ..!

Spread the love

ಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಅವರ ಮಾವನವರಾದ ಚಂದ್ರಶೇಖರ ಇಂಡಿ ಅವರ ನ್ಯಾಯಾಂಗ ಬಂಧನವನ್ನ ಮತ್ತೆ ಹದಿನಾಲ್ಕು ದಿನಗಳವರೆಗೆ ಮುಂದೂಡಿ ಆದೇಶ ಮಾಡಲಾಗಿದೆ.

ನವೆಂಬರ್ 5ರಂದು ಬಂಧನವಾಗಿರುವ ವಿನಯ ಕುಲಕರ್ಣಿ ಹಾಗೂ ಕೆಲವು ದಿನಗಳ ಹಿಂದೆ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ಚಂದ್ರಶೇಖರ ಇಂಡಿಯವರನ್ನ ಕಾರಾಗೃಹದಲ್ಲಿ ಇಡಲಾಗಿದ್ದು, ಇಂದು ಮತ್ತೆ 14 ದಿನದ ನ್ಯಾಯಾಂಗ ಬಂಧನವನ್ನ ಮುಂದೂಡಿ ಆದೇಶಿಸಲಾಗಿದೆ.

ಧಾರವಾಡ ಜಿಲ್ಲೆಯ ಮೂರನೇಯ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ.ಎಂ.ಗಂಗಾಧರ ಅವರು ಇಂದು ಆದೇಶ ನೀಡಿದ್ದಾರೆ. ಈ ಆದೇಶದಿಂದ ಮತ್ತೆ ಫೆಬ್ರುವರಿ 19ರ ವರೆಗೆ ನ್ಯಾಯಾಂಗ ಬಂಧನ ಮುಂದುವರಿದೆ.

ಮಾಜಿ ಸಚಿವ ವಿನಯ ಕುಲಕರ್ಣಿಯವರ ಬಗ್ಗೆ ಈಗಾಗಲೇ ಸಿಬಿಐ ಜಾರ್ಜಸೀಟ್ ಸಲ್ಲಿಕೆ ಮಾಡಿದ್ದು, ಜಾರ್ಜಸೀಟಿನಲ್ಲಿ ಯಾವ ಯಾವ ಅಂಶಗಳನ್ನ ದಾಖಲು ಮಾಡಲಾಗಿದೆ ಎಂಬುದು ಇನ್ನೂ ಬಹಿರಂಗವಾಗಿಲ್ಲ.


Spread the love

About Laxminews 24x7

Check Also

ಕರ್ನಾಟಕದಲ್ಲಿ ವಿದ್ಯುತ್‌ ಉತ್ಪಾದನೆ ಶೇ. 5ರಷ್ಟು ಹೆಚ್ಚಳ : ಬೇಡಿಕೆ ಮೀರಿದ ಉತ್ಪಾದನೆ ನೆರೆರಾಜ್ಯಗಳಿಗೆ ಮಾರಾಟ, ರೈತರಿಗೂ ಲಾಭ

Spread the loveಬೆಂಗಳೂರು : ರಾಜ್ಯದಲ್ಲಿ ವಾರ್ಷಿಕ ವಿದ್ಯುತ್‌ ಉತ್ಪಾದನೆಯು ಶೇ.5ರಷ್ಟು ಹೆಚ್ಚಳವಾಗಿದ್ದು, ಈ ಬಾರಿ ಬೇಸಿಗೆಯಲ್ಲಿ ವಿದ್ಯುತ್‌ಗೆ ಬರವಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ