Breaking News

ಸುಳ್ಳು ಹೇಳೋದ್ರಲ್ಲಿ ಸಿದ್ದರಾಮಯ್ಯ ನಿಸ್ಸೀಮರು: ಸಿ.ಟಿ.ರವಿ

Spread the love

ಬೆಂಗಳೂರು: ಮೆಟ್ರೋ  ದರ ಏರಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಮೆಟ್ರೋ ದರ ಏರಿಕೆ ಕುರಿತು ಬಿಜೆಪಿ ಹೋರಾಟ ಮಾಡಲಿದೆ ಅಂತ ಬಿಜೆಪಿ ನಾಯಕ ಸಿ.ಟಿ ರವಿ  ತಿಳಿಸಿದ್ದಾರೆ.

ಮೆಟ್ರೋ ದರ ಏರಿಕೆ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸುಳ್ಳು ಹೇಳೋದ್ರಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ಸುಳ್ಳು ಮತ್ತು ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖ. ಸುಳ್ಳು ಬೆಳಗ್ಗೆ ಪ್ರಾರಂಭ ಮಾಡಿ‌ ಅಂತ್ಯ ಮಾಡೋದು ಸುಳ್ಳಿನಿಂದಲೇ ಅಂತ‌ ಕಿಡಿಕಾರಿದರು. 

ಮೆಟ್ರೋ ದರ ಏರಿಕೆ ಸಂಬಂಧ ಪಿ.ಸಿ ಮೋಹನ್ ವಿವರವಾಗಿ ಪತ್ರ ಬರೆದಿದ್ದರು. ಮೆಟ್ರೋ ಲಾಭದಲ್ಲಿ ನಿಮಗೆ ಪಾಲು ಇಲ್ಲವಾ ಸಿದ್ದರಾಮಯ್ಯ ಅವರೇ? ಸಮಿತಿ ಅಧ್ಯಕ್ಷ ಯಾರ್ ಆಗಬೇಕು ಅಂತ ಶಿಫಾರಸು ಮಾಡೋರು ಯಾರು? ಸಂಸದರು ಹೇಳಿದ ಹಾಗೆ ಮೆಟ್ರೋ ದರ ಏರಿಕೆ ಬಗ್ಗೆ ಬಿಜೆಪಿ ಹೋರಾಟ ಮಾಡುತ್ತದೆ ಅಂತ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ