ಚಿಕ್ಕಮಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುವವರಿಗೆ ಸಚಿವ ಸಿ.ಟಿ.ರವಿ ಸಾರ್ವಜನಿಕ ಚರ್ಚೆಗೆ ಆಹ್ವಾನ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ವಿರೋಧಕ್ಕಾಗಿ ವಿರೋಧ ಮಾಡೋದು ಅರ್ಥಹೀನ. 2003ರಲ್ಲಿ ಡ್ರಾಫ್ಟ್ ಆಯ್ತು. ಯುಪಿಎ ಸರ್ಕಾರದ ಅವಧಿಯಲ್ಲಿ ಆ ಡ್ರಾಫ್ಟ್ ನ ಪರಿಷ್ಕರಣೆ ಮಾಡಿ ಮಾಡೆಲ್ ಡ್ರಾಫ್ಟ್ ಆದ ಬಳಿಕ 16 ರಾಜ್ಯಗಳು ಅದನ್ನು ಒಪ್ಪಿಕೊಂಡವು. ಈಗ ಅದನ್ನು ಇನ್ನಷ್ಟು ಸುಧಾರಣೆ ಮಾಡಿ ರೈತ ಸ್ನೇಹಿಯಾಗಿ ಹೊಸ ಕಾಯ್ದೆಯನ್ನು ಜಾರಿಗೆ ತಂದಿದೆ. ಅದನ್ನು ವಿರೋಧ ಮಾಡುವವರಿಗೆ ನಾನು ಸಾರ್ವಜನಿಕ ಚರ್ಚೆಗೆ ಆಹ್ವಾನ ಮಾಡುತ್ತೇನೆ ಎಂದಿದ್ದಾರೆ.

ಈ ಕಾಯ್ದೆಯಿಂದ ರೈತರಿಗೆ ಏನು ತೊಂದರೆ ಆಗುತ್ತೆ ಹೇಳಿ ಎಂದು ವಿರೋಧಿಸುವವರಿಗೆ ಪ್ರಶ್ನಿಸಿದ್ದಾರೆ. ಹೆಚ್ಚು ಜನ ಖರೀದಿದಾರರು ಹುಟ್ಟಿಕೊಂಡರೆ ರೈತರಿಗೆ ಲಾಭ ಹೆಚ್ಚೋ ವಿನಃ ನಷ್ಟವಲ್ಲ. ಯಾರು ಹೆಚ್ಚು ಬೆಲೆ ಕೊಡುತ್ತಾರೆ. ಎಲ್ಲಿ ಹೆಚ್ಚು ಲಾಭ ಸಿಗುತ್ತೆ ರೈತರು ಅಲ್ಲಿ ಹೋಗಿ ಮಾರಬಹುದು. ಸ್ಪರ್ಧೆ ಬೆಳೆಯುತ್ತೆ, ಅವಕಾಶ ಹೆಚ್ಚಾದಾಗ ರೈತರು ಮುಕ್ತವಾಗಿ ಮಾರಾಟ ಮಾಡಲು ಅವಕಾಶ ಸಿಗುತ್ತೆ ಎಂದು ತಿಳಿಸಿದರು.
ಹೋಗಿ ಬೀದಿಗೆ ಸುರಿಯಬೇಕು. ಇಲ್ಲ ಕೇಳಿದಷ್ಟು ದರಕ್ಕೆ ಕೊಡುವ ವ್ಯವಸ್ಥೆ ಹೋಗಿ ಹಲವು ಮಾರ್ಗ, ಮಾರುಕಟ್ಟೆಗಳು ಹುಟ್ಟಿಕೊಂಡಾಗ ಮಾರುವ ಅವಕಾಶ ಹೆಚ್ಚಿರುತ್ತೆ. ಎಲ್ಲಿ ಲಾಭ ಸಿಗುತ್ತೊ ಅಲ್ಲಿಗೆ ರೈತರು ಮಾರುತ್ತಾರೆ. ಇದನ್ನು ವಿರೋಧ ಮಾಡೋದು ಅರ್ಥಹೀನ ಎಂದು ವಿರೋಧಿಸುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ತೊಂದರೆಯಾಗುತ್ತೆ. ಯಾರಿಗೆ ಅಂದರೆ ತಮ್ಮದೆ ವಿಂಗ್ ಮಾಡಿಕೊಂಡು ರೇಟ್ ರೈಸ್ ಆಗದಂತೆ ನೋಡಿಕೊಳ್ಳುತ್ತಿದ್ದ ಯಂಕ, ನಾಣಿ, ಸೀನರ ಆಟ ಬಂದ್ ಆಗಲಿದೆ ಎಂದಿದ್ದಾರೆ. ಅಂದರೆ ಈ ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದ್ದು, ಮಧ್ಯವರ್ತಿಗಳಿಗೆ ತೊಂದರೆಯಾಗಲಿದೆ. ಹಾಗಾಗಿ ಈ ಕಾಯ್ದೆಗೆ ವಿರೋಧ ವ್ಯಕ್ತಪಡಿಸುವವರು ಚರ್ಚೆಗೆ ಬನ್ನಿ ಎಂದು ಆಹ್ವಾನ ನೀಡಿದ್ದಾರೆ.
Laxmi News 24×7