ಬೆಂಗಳೂರು: ಕೆ.ಆರ್.ಪುರಂನ ಮಂಜುನಾಥ್ ಲೇಔಟ್ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಕಟ್ಟಡಕ್ಕೆ ಬೆಂಕಿ ಆವರಿಸಿದೆ. ಈ ಅವಘಡದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಪೂರ್ಣಿಮ (46), ವೆಂಕಟೇಶ್ (40) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೂರ್ಣಿಮಾ ಅವರ ಸ್ಥಿತಿ ಗಂಭೀರವಾಗಿದೆ.
ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Laxmi News 24×7