Home / ಜಿಲ್ಲೆ / ಮುಂದಿನ ಮೂರು ತಿಂಗಳ ಅವಧಿಗೆ ಅಡುಗೆ ಅನಿಲ ಸಿಲಿಂಡರ್ ಉಚಿತ:BSY

ಮುಂದಿನ ಮೂರು ತಿಂಗಳ ಅವಧಿಗೆ ಅಡುಗೆ ಅನಿಲ ಸಿಲಿಂಡರ್ ಉಚಿತ:BSY

Spread the love

ಬೆಂಗಳೂರು: ದೇಶಾದ್ಯಂತ ಲಾಕ್​ಡೌನ್​ ಜಾರಿಯಾಗಿರುವ ಹಿನ್ನಲೆಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅದರಲ್ಲೂ ಬಡವರು, ನಿರ್ಗತಿಕರ ಸ್ಥಿತಿ ಅಯೋಮಯವಾಗಿದೆ. ಅಗತ್ಯ ಮತ್ತು ತುರ್ತು ಸೇವೆಗಳನ್ನು ಜನರಿಗೆ ಒದಗಿಸಲು ರಾಜ್ಯ ಸರ್ಕಾರ ಸಾಕಷ್ಟು ಯತ್ನ ನಡೆಸಿದೆ. ಈ ನಿಟ್ಟಿನಲ್ಲಿ ಸಿಎಂ ಬಿಎಸ್​ ಯಡಿಯೂರಪ್ಪ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ ಅಡುಗೆ ಅನೀಲ ವಿತರಿಸಲು ಮುಂದಾಗಿದ್ದಾರೆ.

ಈ ಹಿಂದೆ ರಾಜ್ಯ ಸರ್ಕಾರ ಬಡವರಿಗೆ 2 ತಿಂಗಳ ಪಡಿತರವನ್ನು ಮುಂಚಿತವಾಗಿ ವಿತರಣೆ ಮಾಡಲು ಆದೇಶ ನೀಡಿದೆ. ಇದೀಗ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯಡಿ ಮೂರು ತಿಂಗಳು ಉಚಿತವಾಗಿ ಅಡುಗೆ ಅನಿಲ ಸಿಲಿಂಡರ್ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಅನಿಲ ಭಾಗ್ಯ ಯೋಜನೆಯಡಿಯಲ್ಲಿ ಬರುವವರು ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಮುಂದಿನ ಮೂರು ತಿಂಗಳ ಅವಧಿಗೆ ಅಡುಗೆ ಅನಿಲ ಸಿಲಿಂಡರ್ ಉಚಿತವಾಗಿ ವಿತರಿಸಲಾಗುತ್ತದೆ. ಈ ಯೋಜನೆಗಾಗಿ ರಾಜ್ಯ ಸರ್ಕಾರ 27.52 ಕೋಟಿ ರೂಪಾಯಿ ಭರಿಸಲಿದೆ. ಸುಮಾರು 1 ಲಕ್ಷ ಫಲಾನುಭವಿಗಳಿಗೆ ಇದರ ನೇರ ಪ್ರಯೋಜನ ಸಿಗಲಿದೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ