Breaking News
Home / Uncategorized / ಧಾರವಾಡ: ಕೊಲೆ ಆರೋಪಿಯನ್ನು ಹೆಡೆಮುರಿ ಕಟ್ಟಿದ ಪೊಲೀಸರು

ಧಾರವಾಡ: ಕೊಲೆ ಆರೋಪಿಯನ್ನು ಹೆಡೆಮುರಿ ಕಟ್ಟಿದ ಪೊಲೀಸರು

Spread the love

ಧಾರವಾಡ: ಇಲ್ಲಿನ ಮದಿಹಾಳದಲ್ಲಿ ನಿನ್ನೆ ನಡೆದ ಕೊಲೆಗೆ ಸಂಬಂಧಿಸಿದಂತೆ ರೌಡಿಶೀಟರ್ ಶ್ರೀಶೈಲ ಗಾಣಿಗೇರನನ್ನು ಬಂಧಿಸುವಲ್ಲಿ ಶಹರ ಠಾಣೆ ಪೊಲೀಸರ ಯಶಸ್ವಿಯಾಗಿದ್ದಾರೆ.

ಶಿವಯೋಗಿ ಭಾವಿಕಟ್ಟಿ ಹಾಗೂ ಆರೋಪಿ ಶ್ರೀಶೈಲ ಗಾಣಿಗೇರ ಮಧ್ಯೆ ಆಸ್ತಿಗೆ ಸಂಬಂಧಿಸಿದ ವ್ಯವಹಾರವಿತ್ತು. ಈ ಸಂಬಂಧ ಮೊನ್ನೆ ತಡರಾತ್ರಿ ಶಿವಯೋಗಿ ಹಾಗೂ ಆತನ ಇನ್ನಿಬ್ಬರು ಸಹಚರರಾದ ಈರಪ್ಪ ಯಂಗಳ್ಳಿ ಹಾಗೂ ಸುನೀಲ ಕೋನಣ್ಣವರ ಅವರು ಶ್ರೀಶೈಲನ ಮನೆಗೆ ಹೋಗಿ ಕ್ಯಾತೆ ತೆಗೆದಿದ್ದರು. ಈ ಜಗಳ ವಿಕೋಪಕ್ಕೆ ಹೋಗಿದ್ದರಿಂದ ಶ್ರೀಶೈಲ ರಿವಾಲ್ವಾರ್ ನಿಂದ ಶಿವಯೋಗಿಯನ್ನು ಹತ್ಯೆ ಮಾಡಿದ್ದಾನೆ. ಅಲ್ಲದೇ ಉಳಿದ ಇಬ್ಬರ ಮೇಲೂ ದಾಳಿ ನಡೆಸಿದ್ದು, ಅವರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ನಡೆದ ಕೂಡಲೇ ಆರೋಪಿ ಶ್ರೀಶೈಲ ಅಲ್ಲಿಂದ ಪರಾರಿಯಾಗಿದ್ದ.

ಆರೋಪಿಯನ್ನು ಪತ್ತೆ ಮಾಡಲು ಪೊಲೀಸ್ ಆಯುಕ್ತ ಆರ್.ದಿಲೀಪ್ ಅವರು ಎಸಿಪಿ ಅನುಶಾ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿದ್ದರು. ಆ ತಂಡ ಇದೀಗ ಆರೋಪಿಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದು, ಆತನಿಂದ ಹತ್ಯೆಗೆ ಬಳಸಿದ ರಿವಾಲ್ವಾರ್ ಹಾಗೂ ಬೈಕ್ ವಶಪಡಿಸಿಕೊಳ್ಳಲಾಗಿದೆ.


Spread the love

About Laxminews 24x7

Check Also

ಅನ್ಯ ಜಾತಿ ಎಂದು ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣು

Spread the loveಕಲಬುರಗಿ, ಮೇ.11: ಮದುವೆಗೆ ನಿರಾಕರಿಸಿದ್ದಕ್ಕೆ ಕಲಬುರಗಿಯಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ