Breaking News
Home / ಜಿಲ್ಲೆ / ನಟ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು : ಪೊಲೀಸರಿಂದ ಲಾಠಿ ಪ್ರಹಾರ, ಖುರ್ಚಿ, ಸೋಫಾ ಪೀಸ್​ ಪೀಸ್

ನಟ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು : ಪೊಲೀಸರಿಂದ ಲಾಠಿ ಪ್ರಹಾರ, ಖುರ್ಚಿ, ಸೋಫಾ ಪೀಸ್​ ಪೀಸ್

Spread the love

ದಾವಣಗೆರೆ : ಜಿಲ್ಲೆ ಹರಿಹರ ತಾಲ್ಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಮಂಗಳವಾರ ನಟ ಸುದೀಪ ಅವರಿಗೆ ಪ್ರಸನ್ನಾನಂದ ಸ್ವಾಮೀಜಿ ‘ ವಾಲ್ಮೀಕಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಮೊದಲು ನಟ ಕಿಚ್ಚ ಸುದೀಪ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನ ನೋಡಲು ಹಾಗೂ ಸೆಲ್ಫಿ ತೆಗೆಸಿಕೊಳ್ಳಲು ಜಮಾಯಿಸಿದಾಗ ನೂಕು ನುಗ್ಗಲು ಸಂಭವಿಸಿದೆ.

ಪರಿಸ್ಥಿತಿಯನ್ನ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಸುದೀಪ್​ ನೋಡಲು ಮುಗಿಬಿದ್ದ ಅಭಿಮಾನಿಗಳು ವೇದಿಕೆ ಹತ್ತಿದ್ದಾರೆ.

ಈ ವೇಳೆ ಅಭಿಮಾನಿಗಳ ನೂಕು ನುಗ್ಗಾಟದಲ್ಲಿ ಕುರ್ಚಿ, ಸೋಫಾ ಸೆಟ್ ಪೀಸ್​ ಪೀಸ್ ಆಗಿದೆ. ಜನರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ