ದಾವಣಗೆರೆ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಗೆ ಅನಾರೋಗ್ಯವಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. 18 ವರ್ಷದ ಪಿಯುಸಿ ವಿದ್ಯಾರ್ಥಿನಿ ಟಿ.ಶ್ವೇತಾ ಮೃತ ದುರ್ದೈವಿ.
ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರದಲ್ಲಿ ಈ ದುರ್ಘಟನೆ ಸಂಭವಿಸಿದೆ. ತನ್ನ ಮಗಳ ಸಾವು ಅನುಮಾನಾಸ್ಪದವಾಗಿದೆ ಎಂದು ಶ್ವೇತಾ ಪೋಷಕರು ತನಿಖೆಗೆ ಮನವಿ ಮಾಡಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ.