Home / ಅಂತರಾಷ್ಟ್ರೀಯ / ಅತ್ಯಾಚಾರಿಗಳ ಕೊರಳಿಗೆ ಸಾವಿನ ಕುಣಿಕೆ ಬೀಳುತ್ತಿದ್ದಂತೆ ದೇಶಾದ್ಯಂತ ಸಂಭ್ರಮ..!!

ಅತ್ಯಾಚಾರಿಗಳ ಕೊರಳಿಗೆ ಸಾವಿನ ಕುಣಿಕೆ ಬೀಳುತ್ತಿದ್ದಂತೆ ದೇಶಾದ್ಯಂತ ಸಂಭ್ರಮ..!!

Spread the love

ನವದೆಹಲಿ:ಏಳು ವರ್ಷಗಳ ಸತತ ಹೋರಾಟದ ಬಳಿಕ ನಿರ್ಭಯಾ ಮೇಲಿನ ಪೈಶಾಚಿಕ ಅತ್ಯಾಚಾರ ಮತ್ತು ಬೀಕರ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ನಾಲ್ವರು ನರ ರಾಕ್ಷಸರಿಗೆ ಇಂದು ಮುಂಜಾನೆ ದೆಹಲಿಯ ತಿಹಾರ್ ಜೈಲಿನಲ್ಲಿ ಮರಣದಂಡನೆ ವಿಧಿಸಿರುವುದಕ್ಕೆ ದೇಶಾದ್ಯಂತ ಸಂಭ್ರಮಾಚರಣೆ ನಡೆಯುತ್ತಿದೆ.ಪರಮಪಾಪಿಗಳಾದ ಮುಕೇಶ್ ಸಿಂಗ್, ಪವನ್ ಕುಮಾರ್, ವಿನಯ್ ಶರ್ಮ ಮತ್ತು ಅಕ್ಷಯ್ ಕುಮಾರ್‍ಗೆ ಇಂದು ಬೆಳಗ್ಗೆ ಸರಿಯಾಗಿ 5.30ರಲ್ಲಿ ನೇಣಿಗೇರಿಸಲಾಯಿತು. ಕಾನೂನು ಪ್ರಕಾರವಾಗಿಯೇ ಕೀಚಕರ ಸಂಹಾರವಾಗುತ್ತಿದ್ದಂತೆಯೇ ಇಂದು ಬೆಳಗ್ಗೆಯಿಂದಲೇ ದೇಶದ ವಿವಿಧ ನಗರಗಳಲ್ಲಿ ಮಹಿಳೆಯರು ಸಿಹಿ ಹಂಚಿ ಸಂಭ್ರಮಿಸಿದರು.

ಕೊನೆಗೂ ನಿರ್ಭಯಾ ಆತ್ಮಕ್ಕೆ ಶಾಂತಿ ದೊರೆತಿದೆ ಮತ್ತು ಅಕೆಯ ಪೋಷಕರು ನಡೆಸಿದ ಸುದೀರ್ಘ ಕಾನೂನು ಸಮರಕ್ಕೆ ನ್ಯಾಯ ಲಭಿಸಿದೆ ಎಂಬು ಮಹಿಳೆಯರು ಸಂತೃಪ್ತ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿತ್ತು.ನಿರ್ಭಯಾ ಚಿರಾಯುವಾಗಲಿ, ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳು ಮೊಳಗಿದವು.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ