Breaking News

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

Spread the love

ನವದೆಹಲಿ: ಜಲಮಂಡಳಿಯ ಯಮಗುಂಡಿಗೆ ಬೈಕ್ ಸವಾರನೊಬ್ಬ ಬಲಿಯಾಗಿದ್ದಾನೆ. ಆಳವಾದ ಗುಂಡಿಗೆ ಬಿದ್ದು ಬೈಕ್ ಸವಾರ ಕಮಲ್ ಪ್ರಾಣಪಕ್ಷಿ ಹಾರಿ ಹೋಗಿದೆ.

ಪಶ್ಚಿಮ ದೆಹಲಿಯ ಜನಕಪುರಿಯಲ್ಲಿ ಜಲಮಂಡಳಿಯಿಂದ ದುರಸ್ತಿ ಕಾಮಗಾರಿ ನಡೆಯುತ್ತಿತ್ತು. 20 ಅಡಿ ಆಳವಾದ ಗುಂಡಿ ಅಗೆಯಲಾಗಿತ್ತು. ನಿನ್ನೆ ರಾತ್ರಿ ರೋಹಿಣಿಯಲ್ಲಿರುವ ಕಚೇರಿಯಿಂದ ಜನಕಪುರಿಯ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಕಮಲ್ ಆಕಸ್ಮಿಕವಾಗಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ.

ರಸ್ತೆಯಲ್ಲಿ ಅಗೆಯಲಾಗಿದ್ದ ಗುಂಡಿಗೆ ಯಾವುದೇ ಎಚ್ಚರಿಕಾ ಚಿಹ್ನೆಗಳು, ಬ್ಯಾರಿಕೇಡ್‌ಗಳು, ರಿಫ್ಲೆಕ್ಟರ್ ಅಳವಡಿಸದೇ ಇದ್ದಿದ್ದರಿಂದ ಈ ದುರಂತ ಸಂಭವಿಸಿದೆ. ಘಟನೆ ಬಗ್ಗೆ ದೆಹಲಿ ಸರ್ಕಾರದ ಸಚಿವ ಆಶೀಷ್ ಸೂದ್ ತನಿಖೆಗೆ ಆದೇಶ ನೀಡಿದ್ದಾರೆ.

ಇತ್ತ ಬೆಂಗಳೂರಿನಲ್ಲೂ ಬಾಲಕನೊಬ್ಬ ಚರಂಡಿಗೆ ಬಿದ್ದು ಗಾಯಗಳೊಂದಿಗೆ ಪಾರಾದ ಘಟನೆ ನಡೆದಿದೆ. ಸರ್ವಜ್ಞನಗರದ ಗೋವಿಂದಪುರದಲ್ಲಿ ಶಾಲೆ ಎದುರು ಚರಂಡಿ ಕಾಮಗಾರಿ ಮಾಡಲಾಗ್ತಿತ್ತು. ಕಬ್ಬಿಣದ ಮೋಲ್ಡಿಂಗ್ ಕಂಬಿಗಳನ್ನು ಹಾಕಿ ಹಾಗೇ ಬಿಡಲಾಗಿತ್ತು. ಈ ವೇಳೆ ಚರಂಡಿಯನ್ನು ದಾಟುವಾಗ ಬ್ಯಾಗ್ ಸಮೇತ 1ನೇ ತರಗತಿಯ ಬಾಲಕ ಚರಂಡಿಗೆ ಬಿದ್ದಿದ್ದಾನೆ. ಸಣ್ಣಪುಟ್ಟ ಗಾಯಗಳೊಂದಿಗೆ ಬಾಲಕ ಅಪಾಯದಿಂದ ಪಾರಾಗಿದ್ದಾನೆ.


Spread the love

About Laxminews 24x7

Check Also

ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್‌ರಿಂದ ಸಕಾರಾತ್ಮಕ ಪ್ರತಿಕ್ರಿಯೆ

Spread the love ನವದೆಹಲಿ: ಬೆಂಗಳೂರು, ಮಂಡ್ಯ, ಮೈಸೂರು ರೈಲು ಮಾರ್ಗದ ವಿವಿಧ ಬೇಡಿಕೆಗಳ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ