Breaking News

ಕೊರೊನಾ ಸೋಂಕು ಸಮುದಾಯಕ್ಕೆ ಹರಡಿದೆ – ಕೇಂದ್ರಕ್ಕೆ ಬರೆದ ಪತ್ರದಲ್ಲಿ ವೈದ್ಯಕೀಯ ಕ್ಷೇತ್ರದ ಕಳವಳ

Spread the love

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಎರಡು ಲಕ್ಷದ ಗಡಿಯಲ್ಲಿದ್ದು ಸಮುದಾಯಕ್ಕೆ ಹರಡಿಯಾಗಿದೆ. ಆದರೆ ಕೇಂದ್ರ ಸರ್ಕಾರ ಸೋಂಕು ಸಮುದಾಯಕ್ಕೆ ಹರಡಿಲ್ಲ ಎಂದು ಸುಳ್ಳು ಹೇಳುತ್ತಿದೆ ಎಂದು ವೈದ್ಯಕೀಯ ಕ್ಷೇತ್ರದ ಹಲವು ಸಂಸ್ಥೆಗಳು ಕಳವಳ ವ್ಯಕ್ತಪಡಿಸಿವೆ.

ಕೊರೊನಾ ಸೋಂಕು ಸಮುದಾಯಕ್ಕೆ ಹರಡಿರುವ ಬಗ್ಗೆ ಉಲ್ಲೇಖಿಸಿ ಇಂಡಿಯನ್ ಪಬ್ಲಿಕ್ ಹೆಲ್ತ್ ಅಸೋಸಿಯೇಷನ್ (ಐಪಿಹೆಚ್‍ಎ), ಇಂಡಿಯನ್ ಅಸೋಸಿಯೇಷನ್ ಅಂಡ್ ಸೋಷಿಯಲ್ ಮೆಡಿಸಿನ್ (ಐಎಪಿಎಸ್‍ಎಂ) ಮತ್ತು ಇಂಡಿಯನ್ ಅಸೋಸಿಯೇಷನ್ ಆಫ್ ಎಪಿಡೆಮಿಯಾಲಜಿಸ್ಟ್ (ಐಎಇ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿವೆ.

ಪತ್ರದಲ್ಲಿ ಕೊರೊನಾ ನಿಯಂತ್ರಿಸಲು ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರಗಳು ಸಮರ್ಪಕವಾಗಿಲ್ಲ ಎಂದು ಈ ಮೂರು ಸಂಸ್ಥೆಗಳು ಆರೋಪಿಸಿವೆ. ಮೊದಲ ಹಂತದ ಲಾಕ್‍ಡೌನ್ ಜಾರಿಗೊಳಿಸಿದಾಗಲೇ ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸುವ ವ್ಯವಸ್ಥೆ ಮಾಡಬೇಕಿತ್ತು. ಸೋಂಕು ಹರಡುವಿಕೆ ಹೆಚ್ಚಾದ ಮೇಲೆ ಕಾರ್ಮಿಕರನ್ನು ಕಳುಹಿಸಿದ್ದು ತಪ್ಪು ನಿರ್ಧಾರವಾಗಿದೆ. ಅವರನ್ನು ಕೊರೊನಾ ಸೋಂಕು ಸಮುದಾಯಕ್ಕೆ ಹರಡಿದ ಮೇಲೆ ಕಳುಹಿಸಲಾಗಿದೆ. ಇದರಿಂದ ಕೊರೊನಾ ಇನ್ನಷ್ಟು ಹರಡುವ ಸಾಧ್ಯತೆ ಇದೆ. ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಹರಡುವ ಸಾಧ್ಯತೆಗಳು ಹೆಚ್ಚಾಗಿವೆ ಎಂಬ ಆತಂಕವನ್ನು ವ್ಯಕ್ತಪಡಿಸಲಾಗಿದೆ.

ನಗರ ಪ್ರದೇಶಗಳಿಗೆ ಹೋಲಿಸಿಕೊಂಡರೆ ನಮ್ಮ ಗ್ರಾಮೀಣ ಭಾಗದಲ್ಲಿ ಆರೋಗ್ಯ ಸೌಕರ್ಯಗಳು ಬಹಳ ಕಡಿಮೆ. ಸೌಕರ್ಯಗಳಿಲ್ಲದ ಕಡೆ ಪರಿಸ್ಥಿತಿ ನಿರ್ವಹಣೆ ಮಾಡುವುದು ಕಷ್ಟವಾಗಲಿದೆ. ಇದರಿಂದ ಕೊರೊನಾ ಕಷ್ಟ ಇನ್ನೂ ಹೆಚ್ಚಾಗಲಿದೆ. ಆದ್ದರಿಂದ ಜಿಲ್ಲಾ ಮಟ್ಟದಲ್ಲಿ ಹೆಚ್ಚಿನ ಕ್ರಮಕೈಗೊಳ್ಳಬೇಕಾಗಿದೆ. ಜಿಲ್ಲಾಡಳಿಗಳಿಗೆ ಹೆಚ್ಚಿನ ಅಧಿಕಾರ ಮತ್ತು ನೆರವು ನೀಡಿ. ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಕೂಡಲೇ ಕ್ಲಷ್ಟರ್ ಮಟ್ಟದಲ್ಲಿ ಲಾಕ್‍ಡೌನ್ ಜಾರಿ ಮಾಡಬೇಕು. ಜೊತೆಗೆ ಸೋಂಕಿತರನ್ನು ಬಹಳ ಬೇಗ ಪತ್ತೆಹಚ್ಚಬೇಕು. ಸೂಕ್ತ ಐಸೊಲೇಷನ್ ವ್ಯವಸ್ಥೆ ಮಾಡಬೇಕು ಎಂದು ಪತ್ರದಲ್ಲಿ ಸಲಹೆ ನೀಡಲಾಗಿದೆ.


Spread the love

About Laxminews 24x7

Check Also

ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು,

Spread the loveಮೈಸೂರು: ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಸುರಕ್ಷತಾ ಕ್ರಮವಾಗಿ ಕಂಪನಿಯ ಟ್ರೈನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ