Breaking News
Home / new delhi / 3 ವರ್ಷ ಕಾಲ ಸೈನಿಕರಾಗಿ ದೇಶ ಸೇವೆ – ಭಾರತೀಯ ಸೇನೆಯಲ್ಲಿ ತಾತ್ಕಾಲಿಕ ಉದ್ಯೋಗ……..

3 ವರ್ಷ ಕಾಲ ಸೈನಿಕರಾಗಿ ದೇಶ ಸೇವೆ – ಭಾರತೀಯ ಸೇನೆಯಲ್ಲಿ ತಾತ್ಕಾಲಿಕ ಉದ್ಯೋಗ……..

Spread the love

ನವದೆಹಲಿ: ಭಾರತೀಯ ಸೇನೆಗೆ ಸೇರಿ ದೇಶ ಸೇವೆ ಮಾಡಬೇಕೆಂಬ ಆಸೆ ಯುವ ಜನತೆಯಲ್ಲಿರುತ್ತದೆ. ಆದರೆ ಯಾವುದೋ ಕಾರಣದಿಂದಾಗಿ ಈ ಆಸೆ ಈಡೇರುವುದಿಲ್ಲ. ಆದರೆ ಈಗ 3 ವರ್ಷಗಳ ಕಾಲ ಸೇನೆಯಲ್ಲಿ ಉದ್ಯೋಗ ನೀಡುವ ಬಗ್ಗೆ ಭಾರತೀಯ ಸೇನೆ ಗಂಭೀರವಾಗಿ ಚಿಂತನೆ ನಡೆಸಿದೆ.

ಹೌದು, ಮಿಲಿಟರಿ ಸೇರಿದರೆ ನಿವೃತ್ತಿಯಾಗುವರೆಗೆ ಕೆಲಸ ಮಾಡಬೇಕು ಎಂಬ ನಿಯಮವಿದೆ. ಆದರೆ ಈಗ ಮೂರು ವರ್ಷಗಳ ಕಾಲ ‘ಟೂರ್ ಆಫ್ ಡ್ಯೂಟಿ’ ಹೆಸರಿನಲ್ಲಿ ಯುವಜನತೆಗೆ ಸೇನೆಯಲ್ಲಿ ಸೇವೆ ಸಲ್ಲಿಸಲು ಅನುಮತಿ ನೀಡಲು ಮುಂದಾಗಿದೆ. ಸೇನೆಗೆ ಸೇರುವವರ ಸಂಖ್ಯೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಅವರನ್ನು ಉತ್ತೇಜಿಸಲು ಈ ಯೋಜನೆಗೆ ಕೈ ಹಾಕಿದೆ.

ಒಂದು ವೇಳೆ ಈ ಪ್ರಸ್ತಾಪಕ್ಕೆ ಅನುಮತಿ ಸಿಕ್ಕರೆ ಆರಂಭದಲ್ಲಿ 100 ಅಧಿಕಾರಿಗಳು ಮತ್ತು 1 ಸಾವಿರ ಸೈನಿಕರ ನೇಮಕವಾಗಲಿದೆ. ಈ ಸಂಬಂಧ ಸೇನೆಯ ವಕ್ತಾರ ಕರ್ನಲ್ ಅಮನ್ ಆನಂದ್ ಪ್ರತಿಕ್ರಿಯಿಸಿ, ವಿವಿಧ ಸೇನಾ ಕಮಾಂಡ್ ಗಳ ಪ್ರತಿಕ್ರಿಯೆ ಪಡೆಯಲಾಗಿದೆ. ಟೂರ್ ಆಫ್ ಡ್ಯೂಟಿಯನ್ನು ಪ್ರಯೋಗಿಕವಾಗಿ ಆರಂಭಿಸಲಾಗುತ್ತಿದ್ದು, ಇದು ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ನೇಮಕವಾಗಲಿರುವ ವ್ಯಕ್ತಿಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.

26/ 27 ವಯಸ್ಸಿನ ಯುವಜನತೆಗೆ ತರಬೇತಿ ನೀಡಿ ಉದ್ಯೋಗ ನೀಡಿದಾಗ ತಾತ್ಕಲಿಕವಾಗಿ ನಿರುದ್ಯೋಗ ಸಮಸ್ಯೆ ಕಡಿಮೆಯಾಗುತ್ತದೆ. ಇಲ್ಲಿ ಸೇವೆ ಸಲ್ಲಿಸಿದ ಬಳಿಕ ಪ್ರಮಾಣಪತ್ರ ನೀಡಲಾಗುತ್ತದೆ. ಒಂದು ವೇಳೆ ಸೇನೆಯಲ್ಲಿ ಮುಂದುವರಿಯಲು ಆಸಕ್ತಿ ತೋರಿಸಿದರೆ ಅವರನ್ನು ಮುಂದುವರಿಸಲಾಗುತ್ತದೆ. ಟೂರ್ ಆಫ್ ಡ್ಯೂಟಿಯನ್ನು ಪೂರ್ಣಗೊಂಡ ಬಳಿಕ ಆ ಸೈನಿಕರು ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರದಲ್ಲಿ ಅವರ ಇಷ್ಟದ ಉದ್ಯೋಗಕ್ಕೆ ಸೇರಬಹುದು ಎಂಬ ನಂಬಿಕೆಯನ್ನು ಸೇನೆ ಇಟ್ಟುಕೊಂಡಿದೆ.

ಯುವಜನತೆಗೆ ಸೇನೆ ಸೇರಬೇಕೆಂಬ ಆಸೆ ಇರುತ್ತದೆ. ಆದರೆ ಪೂರ್ಣಾವಧಿಗೆ ಸೇರಬೇಕೆಂಬ ಆಸೆ ಇರುವುದಿಲ್ಲ. ಸೇನೆಯ ಬಗ್ಗೆ ತಿಳಿದುಕೊಳ್ಳಲು, ರಾಷ್ಟ್ರ ಭಕ್ತಿ ತೋರಿಸಲು, ಸಾಹಸ, ಅನುಭವ ಪಡೆದುಕೊಳ್ಳಲು ಇದು ಸಹಕಾರಿಯಾಗಲಿದೆ.

ನಾಗರಿಕರಿಗೆ ಮೂರು ವರ್ಷಗಳ ಸೇನೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ಈಗಾಗಲೇ ಇಸ್ರೇಲಿನಲ್ಲಿದೆ. ಭಾರತದಲ್ಲಿ ಆಸಕ್ತರಿಗೆ ಮಾತ್ರ ಅವಕಾಶ ನೀಡುತ್ತಿದ್ದು ಇಸ್ರೇಲಿನಲ್ಲಿ ಇದು ಕಡ್ಡಾಯ. ಇಸ್ರೇಲ್ ಸುತ್ತ 7 ರಾಷ್ಟ್ರಗಳು ಇರುವ ಅಗತ್ಯಬಿದ್ದಾಗ ಜನರ ನೆರವನ್ನು ಪಡೆಯಲು ಸೇನಾ ತರಬೇತಿಯನ್ನು ಕಡ್ಡಾಯಗೊಳಿಸಲಾಗಿದೆ. 18 ವರ್ಷ ಮೇಲ್ಪಟ್ಟ ಯುವಕರು 36 ತಿಂಗಳ ಕಾಲ, ಯುವತಿಯು 24 ತಿಂಗಳ ಕಾಲ ಇಸ್ರೇಲಿನಲ್ಲಿ ಕಡ್ಡಾಯವಾಗಿ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ.


Spread the love

About Laxminews 24x7

Check Also

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

Spread the love ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ