Breaking News
Home / ಜಿಲ್ಲೆ / ಆಸ್ಪತ್ರೆ ಸಿಗದೇ 7 ಕಿ.ಮೀ ನಡಿಗೆ – ಕೊನೆಗೆ ಡೆಂಟಲ್ ಆಸ್ಪತ್ರೆಯಲ್ಲಿ ಹೆರಿಗೆ

ಆಸ್ಪತ್ರೆ ಸಿಗದೇ 7 ಕಿ.ಮೀ ನಡಿಗೆ – ಕೊನೆಗೆ ಡೆಂಟಲ್ ಆಸ್ಪತ್ರೆಯಲ್ಲಿ ಹೆರಿಗೆ

Spread the love

ಬೆಂಗಳೂರು: ಕೊರೊನಾ ಲಾಕ್‍ಡೌನ್ ವೇಳೆ ಏಳು ಕಿ.ಮೀ ನಡೆದುಕೊಂಡು ಬಂದು ಕೊನೆಗೆ ಎಲ್ಲೂ ಆಸ್ಪತ್ರೆ ಸಿಗದೆ ಡೆಂಟಲ್ ಆಸ್ಪತ್ರೆಯಲ್ಲೇ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಬೆಂಗಳೂರಿನ ದೊಡ್ಡ ಬೊಮ್ಮಸಂದ್ರದಲ್ಲಿ ನಡೆದಿದೆ.

ಕೊರೊನಾ ಲಾಕ್‍ಡೌನ್‍ನಿಂದ ದೇಶವೇ ಸ್ತಬ್ಧವಾಗಿದೆ. ಈ ವೇಳೆ ಲೊಟ್ಟೆಗೊಲ್ಲಹಳ್ಳಿಯಲ್ಲಿ ವಾಸವಿದ್ದ ಅಸ್ಸಾಂ ಮೂಲದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಆಸ್ಪತ್ರೆಗೆ ಹೋಗಲು ಯಾವುದೇ ವಾಹನ ಕೂಡ ಸಿಕ್ಕಿಲ್ಲ. ಆಕೆ ಆಸ್ಪತ್ರೆ ಸಿಗುತ್ತದೆ ಎಂಬ ನಂಬಿಕೆ ಮೇಲೆ ಲೊಟ್ಟೆಗೊಲ್ಲಹಳ್ಳಿಯಿಂದ ದೊಡ್ಡ ಬೊಮ್ಮಸಂದ್ರದವರೆಗೂ ಸುಮಾರು ಏಳು ಕಿ.ಲೋ ಮೀಟರ್ ಹೆರಿಗೆ ನೋವಿನ ನಡುವೆಯೂ ನಡೆದುಕೊಂಡು ಬಂದಿದ್ದಾರೆ.

View image on Twitter

ಹೀಗೆ ತನ್ನ ಗಂಡನ ಜೊತೆ ನಡೆದುಕೊಂಡು ಬಂದ ಮಹಿಳೆಗೆ ಲಾಕ್‍ಡೌನ್ ಇರುವುದರಿಂದ ಯಾವುದೇ ಆಸ್ಪತ್ರೆ ಸಿಕ್ಕಿಲ್ಲ. ಜೊತೆಗೆ ಮುಂದೆ ಹೋಗಲು ಯಾವುದೇ ವಾಹನ ಕೂಡ ಸಿಕ್ಕಿಲ್ಲ. ಈ ನಡುವೆ ಆಕೆಗೆ ಹೆರಿಗೆ ನೋವು ಜಾಸ್ತಿಯಾಗಿದೆ. ಹೀಗಾಗಿ ಆಕೆಯ ಗಂಡ ಅಲ್ಲಿಯೇ ಇದ್ದ ದೊಡ್ಡ ಬೊಮ್ಮಸಂದ್ರದ ಡೆಂಟಲ್ ಆಸ್ಪತ್ರೆಯೊಂದಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿನ ದಂತವೈದ್ಯರು ಡೆಂಟಲ್ ಆಸ್ಪತ್ರೆಯ ಪಕ್ಕದಲ್ಲೇ ಇದ್ದ ಖಾಲಿ ಜಾಗದಲ್ಲಿ ಹೆರಿಗೆ ಮಾಡಿಸಿದ್ದಾರೆ.

ಈ ವಿಚಾರವಾಗಿ ಮಾತನಾಡಿರುವ ಹೆರಿಗೆ ಮಾಡಿಸಿದ ದಂತವೈದ್ಯೆ ಡಾ. ರಮ್ಯಾ, ಆಕೆ ಹೆರಿಗೆ ನೋವಿನ ನಡುವೆಯೂ ಆಸ್ಪತ್ರೆ ಸಿಗುತ್ತೆ ಎಂಬ ನಂಬಿಕೆ ಮೇಲೆ ಸುಮಾರು 7 ಕಿ.ಮೀ ನಡೆದುಕೊಂಡು ಬಂದಿದ್ದಾರೆ. ಆದರೆ ಅವರಿಗೆ ಯಾವುದೇ ಆಸ್ಪತ್ರೆ ಸಿಕ್ಕಿರಲಿಲ್ಲ. ನಂತರ ನಮ್ಮ ಆಸ್ಪತ್ರೆಗೆ ಬಂದು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಹೆರಿಗೆಯ ನಂತರ ಬ್ಲೀಡಿಂಗ್ ಜಾಸ್ತಿ ಇತ್ತು ಜೊತೆಗೆ ಮಗು ಯಾವುದೇ ಪ್ರತಿಕ್ರಿಯೆ ನೀಡಿಲಿಲ್ಲ. ಆದರೆ ನಂತರ ಮಗು ಪ್ರತಿಕ್ರಿಯೆ ನೀಡಿತು. ಬಳಿಕ ಅವರನ್ನು ಅಂಬುಲೆನ್ಸ್ ನಲ್ಲಿ ಕೆಸಿ ಜನರಲ್ ಆಸ್ಪತ್ರೆಗೆ ಕಳುಹಿಸಿಕೊಟ್ಟೆವು ಎಂದು ಹೇಳಿದ್ದಾರೆ.

ಲಾಕ್‍ಡೌನ್ ರೀತಿಯ ತುರ್ತುಪರಿಸ್ಥಿತಿಯ ಸಮಯದಲ್ಲಿ ದಂತವೈದ್ಯೆ ಯಾದರೂ ಹೆರಿಗೆ ಮಾಡಿಸಿದ ವೈದ್ಯೆ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈಗ ಮಗು ಮತ್ತು ವೈದ್ಯೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದು, ತುಂಬ ಒಳ್ಳೆಯ ಕೆಲಸ ಮಾಡಿದ್ದೀರಿ. ನಿಮಗೆ ಧನ್ಯವಾದ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ