Breaking News

ಕೋವಿಡ್ ಕುರಿತು ಸುಳ್ಳು ಸುದ್ದಿ ಬಿತ್ತರಿಸುವವರ ವಿರುದ್ಧ ಕಠಣ ಕ್ರಮ

Spread the love

ಧಾರವಾಡ:  ಕೋವಿಡ್‍-19 ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಮೌಖಿಕವಾಗಿ ಕೆಲವರು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ.  ಸಾರ್ವಜನಿಕರು ಇಂತಹ ವದಂತಿಗಳಿಗೆ ಕಿವಿಗೊಡಬಾರದು ಅಂತಾ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 202 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಅವರಲ್ಲಿ ಈಗಾಗಲೇ 90 ಜನ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕಿಮ್ಸ್  ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿರುವ ಎಲ್ಲರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಸುಳ್ಳು ಸುದ್ದಿ ಬಿತ್ತರಿಸುವವರ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್‍ಗೆ ಸಂಬಂಧಿಸಿದ ಅಧಿಕೃತ ಮಾಹಿತಿ ಜಿಲ್ಲಾಡಳಿತದಿಂದ, ಸಚಿವರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಲಾಗುತ್ತದೆ. ಅಪ ಪ್ರಚಾರ ಮಾಡುವವರ ವಿರುದ್ಧ ಕಾನೂನು ಪ್ರಕಾರ ಶಿಕ್ಷೆ ವಿಧಿಸಲಾಗುವುದು ಎಂದು  ಹೇಳಿದ್ರು.


Spread the love

About Laxminews 24x7

Check Also

ಧಾರವಾಡದ ಹಿರಿಯ ಪತ್ರಿಕಾ ಫೋಟೋಗ್ರಾಫರ್ ಆರ್ ಕೆ ( ರಾಮಚಂದ್ರ ಕುಲಕರ್ಣಿ) ಇನ್ನಿಲ್ಲ

Spread the loveಧಾರವಾಡ: ಆರ್ ಕೆ ಖ್ಯಾತಿಯ ಹಿರಿಯ ಪತ್ರಿಕಾ ಪೋಟೋಗ್ರಾಫರಾಗಿ ಎಲ್ಲರೊಂದಿಗೆ ಸ್ನೇಹದಿಂದ ಇರುತ್ತಿದ್ದ ರಾಮಚಂದ್ರ ಕುಲಕರ್ಣಿ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ