Breaking News
Home / ಜಿಲ್ಲೆ / ಧಾರವಾಡ / ಮದ್ಯ ನಿಷೇಧಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಮುತಾಲಿಕ್

ಮದ್ಯ ನಿಷೇಧಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಮುತಾಲಿಕ್

Spread the love

ಧಾರವಾಡ: ಮದ್ಯ ಮಾರಾಟದಿಂದ ಆದಾಯದ ವಿಚಾರ ಹೇಳುತ್ತಿರುವುದು ನಾಚಿಕೆತನ, ಮದ್ಯ ನಿಷೇಧಿಸಬೇಕೆಂದು ಅಭಿಯಾನ ನಡೆಸುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಧಾರವಾಡದಲ್ಲಿ ಹಲವು ಸಂಘಟನೆಗಳು ಸೇರಿ ರಾಜ್ಯ ಸರ್ಕಾರ ಮದ್ಯ ನಿಷೇಧ ಮಾಡಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮನವಿ ಮಾಡಿವೆ. ಈ ವೇಳೆ ಮಾತನಾಡಿದ ಮುತಾಲಿಕ್, ಲಾಕ್‍ಡೌನ್ ಸಡಿಲಗೊಳಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾದ ಮದ್ಯಪಾನ ಮಾರಾಟಕ್ಕೆ ಅನುಮತಿ ಕೊಟ್ಟಿದ್ದು ನಿರ್ಲಜ್ಜತನದ ಸಂಗತಿ, ಇದು ನಿಷೇಧ ಆಗಬೇಕು. ಮದ್ಯ ಮಾರಾಟದಿಂದ ಆದಾಯದ ವಿಚಾರ ಹೇಳುತ್ತಿರುವುದು ನಾಚಿಕೆತನ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ.

ವೈನ್ ಲಾಬಿಗೆ ಸರ್ಕಾರ ಬಲಿಯಾಗಿದೆ. ಮದ್ಯಪಾನ ಬಡವರನ್ನು ಅನಾಹುತದತ್ತ ತೆಗೆದುಕೊಂಡು ಹೋಗುತ್ತದೆ ಎಂದು ಕಿಡಿಕಾರಿದರು. ರಾಜ್ಯ ಸರ್ಕಾರದಿಂದ ನರಕಕ್ಕೆ ತಳ್ಳುವ ಕೆಲಸ ನಡೆದಿದೆ. ಸರ್ಕಾರಕ್ಕೆ ಇದರ ಶಾಪ ತಟ್ಟಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ದೇಶಾದ್ಯಂತ ಮದ್ಯಪಾನ ಆರಂಭಕ್ಕೆ ವಿರೋಧ ವ್ಯಕ್ತವಾಗಿದೆ. ಶಾಸಕರು, ಸ್ವಾಮೀಜಿಗಳು ಕೂಡಾ ಇದಕ್ಕೆ ವಿರೋಧ ಮಾಡಿದ್ದಾರೆ. ಇದರ ಪರಿಣಾಮ ಸರ್ಕಾರ ಅನುಭವಿಸಲಿದೆ. ಈ ಬಗ್ಗೆ ಅಭಿಯಾನ ನಡೆಸುವುದಾಗಿ ಮುತಾಲಿಕ್ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.


Spread the love

About Laxminews 24x7

Check Also

ಕಿತ್ತೂರು ರಾಣಿ ಚೆನ್ನಮ್ಮ ಕನ್ನಡ ನಾಟಕವನ್ನು ಪ್ರದರ್ಶಿಸುವ ಬೃಹತ್ ಯೋಜನೆಯಲ್ಲಿ ರಂಗಾಯಣ ತಂಡ ಕೆಲಸ ಮಾಡುತ್ತಿದೆ.

Spread the loveಧಾರವಾಡ, ಆಗಸ್ಟ್‌, 12: ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಹಿನ್ನಡೆ ಅನುಭವಿಸಿದ ಧಾರವಾಡ ರಂಗಾಯಣ ಮತ್ತೆ ಕಾರ್ಯಪ್ರವೃತ್ತವಾಗಿದೆ. 18ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ