ಬೆಳಗಾವಿ:ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ

Spread the love

ಬೆಳಗಾವಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಾರಿಗೆ ತಂದಿರುವ ಯೋಜನೆಯಡಿ ಜಿಲ್ಲೆಯ ಕೆಲ ತಾಲ್ಲೂಕುಗಳ ಪತ್ರಕರ್ತರಿಗೆ ಗುರುವಾರ ಉಚಿತ ಬಸ್ ಪಾಸ್ ವಿತರಿಸಲಾಯಿತು.
ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಭವನದಲ್ಲಿ ಗುರುವಾರ ಜರುಗಿದ ಸಮಾರಂಭದಲ್ಲಿ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ ಸಾಂಕೇತಿಕವಾಗಿ ಕೆಲ ಪತ್ರಕರ್ತರಿಗೆ ಪಾಸ್ ವಿತರಿಸಿ ಮಾತನಾಡಿ, ತಾಲೂಕು ಮಟ್ಟದ ಅರ್ಹ ಪತ್ರಕರ್ತರು ಅಗತ್ಯ ದಾಖಲೆಗಳೊಂದಿಗೆ ಸರ್ಕಾರದ ಸೇವಾಸಿಂಧು ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಿ ಪಾಸ್ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ವಾರ್ತಾ ಸಹಾಯಕ ವಿಜಯಕುಮಾರ ಬೆಟಗೇರಿ, ಎಂ.ಎಲ್.ಜಮಾದಾರ, ಪ್ರದೀಪಕುಮಾರ ಮೇಲಿನಮನಿ, ಉಳವಯ್ಯ ಹಿರೇಮಠ ಇತರರಿದ್ದರು.

Spread the love

About Laxminews 24x7

Check Also

ಯಲ್ಲಮ್ಮನಗುಡ್ಡದಲ್ಲಿ ಸಂಚಾರ ಕಿರಿಕಿರಿ

Spread the loveಸವದತ್ತಿ: ಸಮೀಪದ ಯಲ್ಲಮ್ಮನಗುಡ್ಡದ ಶ್ರೀ ರೇಣುಕಾ ಯಲ್ಲಮ್ಮದೇವಿ ಜಾತ್ರೆ ಅಂಗವಾಗಿ ಅಪಾರ ಭಕ್ತ ಸಮೂಹ ಆಗಮಿಸಿದ್ದರಿಂದ ಮಂಗಳವಾರ ಎಲ್ಲೆಡೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ