ಛತ್ರಪತಿ ಶಿವಾಜಿ ದೇಶಪ್ರೇಮದ ಪ್ರತೀಕ

Spread the love

ಬೆಳಗಾವಿ:ಛತ್ರಪತಿ ಶಿವಾಜಿ ಮಹಾರಾಜರು ಧೈರ್ಯ, ಶಿಸ್ತು ಮತ್ತು ದೇಶಪ್ರೇಮದ ಪ್ರತೀಕ. ಅವರ ಜೀವನ ನಮ್ಮಲ್ಲಿ ಸ್ವಾಭಿಮಾನ ಮತ್ತು ಆತ್ಮವಿಶ್ವಾಸವನ್ನು ಮೂಡಿಸುತ್ತದೆ ಎಂದು ಹಿರಿಯ ಸಾಹಿತಿ ಸಿ.ಕೆ.ಜೋರಾಪುರ ತಿಳಿಸಿದರು .
ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ನಗರದ ಶಿವಾಜಿ ಉದ್ಯಾನದಲ್ಲಿ ಗುರುವಾರ ಏರ್ಪಡಿಸಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಲ್ಯದಲ್ಲೇ ಸ್ವರಾಜ್ಯದ ಮಹಾನ ಕನಸು ಕಂಡ ಶಿವಾಜಿ ತಮ್ಮ ಬುದ್ಧಿವಂತಿಕೆ ಮತ್ತು ಧೈರ್ಯದಿಂದ ಅನೇಕ ಕೋಟೆಗಳನ್ನು ಜಯಿಸಿ, ಮರಾಠಾ ಸಾಮ್ರಾಜ್ಯವನ್ನು ಸ್ಥಾಪಿಸಿದರು. ನ್ಯಾಯಪ್ರಿಯ ಆಡಳಿತಗಾರರಾಗಿ ಮಹಿಳೆಯರ ಗೌರವ ಕಾಪಾಡಿದವರು ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ರವಿ ನೃತ್ಯ ತಂಡದ ನಿರ್ದೇಶಕ ರವೀಂದ್ರ ಶರ್ಮಾ ಇತರರಿದ್ದರು.
ಇದಕ್ಕೂ ಮುಂಚೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಶಿವಾಜಿ ಮಹಾರಾಜರ ಮೂರ್ತಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು. ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ, ಪಾಲಿಕೆ ಆಯುಕ್ತ ಎಂ.ಕಾರ್ತಿಕ ಇತರರಿದ್ದರು.

Spread the love

About Laxminews 24x7

Check Also

ಮಹಿಳಾ ಅಧಿಕಾರಿಗೆ ಬೆದರಿಕೆ ಪ್ರಕರಣ ಬಂಧಿತರು ಪುನಃ ಪೊಲೀಸ್ ವಶಕ್ಕೆ

Spread the loveಬೆಳಗಾವಿ: ಮಹಿಳಾ ಅಧಿಕಾರಿ ಮನೆಯಲ್ಲಿ ರಹಸ್ಯ ಕ್ಯಾಮರಾ ಇಟ್ಟು ಖಾಸಗಿ ದೃಶ್ಯ ಸೆರೆಹಿಡಿದು, ವೈರಲ್ ಮಾಡುವ ಬೆದರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ