Breaking News

ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಷ್ಟು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.

Spread the love

ಕನಕಪುರ ನಗರಸಭೆಯ ಸಭಾಂಗಣದಲ್ಲಿ ನಡೆದ ತಾಲ್ಲೂಕು ಕೆಡಿಪಿ ಸಭೆಯಲ್ಲಿ ಪಾಲ್ಗೊಂಡೆನು. ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಷ್ಟು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.

ಪ್ರಮುಖವಾಗಿ 1) ಕನಕಪುರ ತಾಲ್ಲೂಕಿನಲ್ಲಿ ಇಲ್ಲಿಯವರೆಗೂ Covid19 ನಿಯಂತ್ರಣಕ್ಕೆ ತಗೆದುಕೊಂಡ ಕ್ರಮಗಳು ಮತ್ತು ಮುಂದೆ ತಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ
2) ಕೊರೋನಾ ಹೊಡೆತದಿಂದ ಬಹಳಷ್ಟು ತೊಂದರೆಗೀಡಾದ ಅಸಂಘಟಿತ ಕಾರ್ಮಿಕ ವರ್ಗ, ವಲಸೆ ಕಾರ್ಮಿಕರು, ಆಟೋ/ಕ್ಯಾಬ್ ಚಾಲಕರು, ನೇಕಾರರಿಗೆ ವಿತರಣೆ ಮಾಡಿರುವ ಮತ್ತು ಭಾಕಿ ವಿತರಣೆ ಆಗಬೇಕಿರುವ ಸಹಾಯಧನದ ಬಗ್ಗೆ
3) ರೈತರಿಗೆ ಕಿಸಾನ್ ಯೋಜನೆಯಡಿ ನೀಡಿರುವ ಮತ್ತು ಭಾಕಿ ಇರುವ ಸಹಾಯಧನದ ವಿಚಾರಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್.ರವಿಯವರು, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀ ಬಸಪ್ಪನವರು, ತಾಲ್ಲೂಕು ಪಂಚಾಯಿತ್ ಅಧ್ಯಕ್ಷರಾದ ಶ್ರೀ ನಾಗಣ್ಣನವರು ಹಾಗೂ ಜಿಲ್ಲಾ ಪಂಚಾಯತ್ ತಾಲ್ಲೂಕು ಪಂಚಾಯತ್ ಸದಸ್ಯರು ಮತ್ತು ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

https://youtu.be/I1U-UG-NHuk


Spread the love

About Laxminews 24x7

Check Also

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Spread the loveಬೆಂಗಳೂರು: ಇನ್ನು ಮುಂದೆ  ಎಸ್‌ಎಸ್‌ಎಲ್‌ಸಿ ಪರೀಕ್ಷೆ  625ರ ಬದಲಿಗೆ 525 ಅಂಕಗಳಿಗೆ ನಡೆಸಲು ಕರ್ನಾಟಕ ಸರ್ಕಾರ ಮಹತ್ವದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ