Breaking News

ನವದೆಹಲಿಗೆ ತೆರಳಿದ್ದ ಕೃಷಿ ಇಲಾಖೆಯ ಅಧಿಕಾರಿಗೆ ಕೋವಿಡ್‌-19 ತಗುಲಿರುವುದು ದೃಢಪಟ್ಟಿದೆ.

Spread the love

ಪಾಟ್ನಾ: ಪ್ರಧಾನಿ, ರಾಷ್ಟ್ರಪತಿ, ಉಪ ರಾಷ್ಟ್ರಪತಿ ಹಾಗೂ ಕೇಂದ್ರ ಸಚಿವರುಗಳಿಗೆ ಈ ತಿಂಗಳ ಆರಂಭದಲ್ಲಿ ಲಿಚ್ಚಿ ಹಣ್ಣು ಕೊಡುಗೆ ನೀಡಲು ನವದೆಹಲಿಗೆ ತೆರಳಿದ್ದ ಕೃಷಿ ಇಲಾಖೆಯ ಅಧಿಕಾರಿಗೆ ಕೋವಿಡ್‌-19 ತಗುಲಿರುವುದು ದೃಢಪಟ್ಟಿದೆ.

ಬಿಹಾರಕ್ಕೆ ಜೂನ್ 11ರಂದು ಮರಳಿದ್ದ, ಅವರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಜೂನ್‌ 20ರಂದು ಸೋಂಕು ಇರುವುದು ದೃಢಪಟ್ಟಿದ್ದು, ಇಲ್ಲಿನ ಕೋವಿಡ್‌ ಕೇರ್ ಕೇಂದ್ರಕ್ಕೆ ದಾಖಲು ಮಾಡಲಾಗಿದೆ.

ಆದರೆ, ಮುಜಾಫರ್‌ಪುರ್ ಜಿಲ್ಲಾಡಳಿತವು ಸ್ಪಷ್ಟನೆ ನೀಡಿದ್ದು, ಈ ಅಧಿಕಾರಿಗೆ ಹೆಸರಾಂತ ಶಾಹಿ ಲಿಚ್ಚಿ ಹಣ್ಣುಗಳ ಬುಟ್ಟಿಗಳನ್ನು ಸುರಕ್ಷಿತವಾಗಿ, ಸಕಾಲದಲ್ಲಿ ಬಿಹಾರ ಭವನಕ್ಕೆ ತಲುಪಿಸುವ ಹೊಣೆ ಒಪ್ಪಿಸಲಾಗಿತ್ತು ಎಂದು ತಿಳಿಸಿದೆ.

‘ದೆಹಲಿಯಲ್ಲಿ ಪ್ರಮುಖರಿಗೆ ಈ ಹಣ್ಣುಗಳ ಬುಟ್ಟಿಗಳನ್ನು ತಲುಪಿಸುವಲ್ಲಿ ಈ ಅಧಿಕಾರಿಯ ಪಾತ್ರವಿರಲಿಲ್ಲ. ಆ ಹೊಣೆಯನ್ನು ನವದೆಹಲಿಯಲ್ಲಿ ಬಿಹಾರ ಭವನದ ಅಧಿಕಾರಿಗಳು ನಿರ್ವಹಿಸಿದ್ದಾರೆ’ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ಪ್ರಸಾದ್‌ ಸಿಂಗ್‌ ವಿವರಣೆ ನೀಡಿದ್ದಾರೆ.

ಸಾರ್ವಜನಿಕ ಸಂಪರ್ಕ ಇಲಾಖೆಯೂ, ‘ಈ ಅಧಿಕಾರಿಯು ಜೂನ್‌ 9ರಂದು ಹಣ್ಣುಗಳ ಬುಟ್ಟಿಗಳನ್ನು ನವದೆಹಲಿಗೆ ಒಯ್ದಿದ್ದರು. ವಿತರಣೆಯಲ್ಲಿ ಈ ಅಧಿಕಾರಿಯ ಪಾತ್ರವೇನೂ ಇರಲಿಲ್ಲ’ ಎಂದು ಸ್ಪಷ್ಟಪಡಿಸಿದೆ.

ಪಾಟ್ನಾಗೆ ಮರಳಿದ ಬಳಿಕ ಅನಾರೋಗ್ಯ ಪೀಡಿತರಾಗಿದ್ದರು. ಮಾದರಿ ಪರೀಕ್ಷೆಯ ವೇಳೆ ಅವರಿಗೆ ಕೋವಿಡ್‌ ಇರುವುದು ದೃಢಪಟ್ಟಿತು. ಹೀಗಾಗಿ, ಕೋವಿಡ್‌ ಆರೈಕೆ ಕೇಂದ್ರಕ್ಕೆ ದಾಖಲುಪಡಿಸಲಾಗಿದೆ ಎಂದು ತಿಳಿಸಿದೆ.


Spread the love

About Laxminews 24x7

Check Also

ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಅಲಿರೆಜಾ ಅರಾಫಿ ಆಯ್ಕೆ

Spread the loveಟೆಹ್ರಾನ್: ಇರಾನ್‌ನ ಇತಿಹಾಸದಲ್ಲೇ ಅತ್ಯಂತ ಭೀಕರ ಕ್ರಾಂತಿ ಮತ್ತು ಬದಲಾವಣೆಯ ಗಾಳಿ ಬೀಸುತ್ತಿದೆ. ಅಮೇರಿಕಾ-ಇಸ್ರೇಲ್ ಜಂಟಿ ವೈಮಾನಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ