ನವದೆಹಲಿ : ತೀವ್ರ ಗೊಳ್ಳುತ್ತಿರುವ ಕೊರೊನಾವೈರಸ್ ಸಾಂಕ್ರಾಮಿಕ ರೋಗಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕ ಸೇರಿ ಏಳು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಲಿದ್ದಾರೆ.
ಕರೋನ ಕೇಸ್ ಪರಿಸ್ಥಿತಿ ಹೆಚ್ಚು ಗಂಭೀರವಾಗಿರುವ ರಾಜ್ಯಗಳು / ಯುಟಿಗಳ ಮೇಲೆ ಕೇಂದ್ರೀಕರಿಸಿ ದೇಶಾದ್ಯಂತ ಸಾಂಕ್ರಾಮಿಕ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನಿಯಮಿತವಾಗಿ ಸಭೆ ನಡೆಸುತ್ತಿದ್ದಾರೆ ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಮಹಾರಾಷ್ಟ್ರ ವು ಅತ್ಯಂತ ಭೀಕರ ವಾದ ಕರೋನ ಪೀಡಿತ ರಾಜ್ಯವಾಗಿ ಮುಂದುವರೆದಿದ್ದು, ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ ಮತ್ತು ಉತ್ತರ ಪ್ರದೇಶ ಇದೆ.