Breaking News

ವಿಶ್ವ ಸೇರಿದಂತೆ ಇಡೀ ಭಾರತದ ಗಮನ ಸೆಳೆದಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್​ನನ್ನು ಬಿಡುಗಡೆ ಮಾಡುತ್ತಿರುವುದು

Spread the love

ದೆಹಲಿ: ವಿಶ್ವ ಸೇರಿದಂತೆ ಇಡೀ ಭಾರತದ ಗಮನ ಸೆಳೆದಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್​ನನ್ನು ಬಿಡುಗಡೆ ಮಾಡುತ್ತಿರುವುದು ಶಾಂತಿಗಾಗಿ ಎಂದು ಹೇಳಿದ್ದ ಪಾಕಿಸ್ತಾನದ ನಿಜ ರೂಪ ಬಯಲಾಗಿದೆ. ಅಭಿನಂದನ್​ ಬಿಡುಗಡೆಗೆ ಕಾರಣ ಬಯಲಾಗಿದೆ. ಭಾರತದ ಆ ಬಂದು ಮಾತಿಗೆ ಹೆದರಿ ಪಾಪಿ ಪಾಕಿಸ್ತಾನ ಬಾಲು ಮುದುಡಿಕೊಂಡಿತ್ತು.

ಅಭಿನಂದನ್​ ಬಿಡುಗಡೆ ಮಾಡದಿದ್ರೆ ಭಾರತದಿಂದ ದಾಳಿ ಆಗುವ ಆತಂಕಕ್ಕೆ ಪಾಕ್​ ಸೇನೆ ಮುಖ್ಯಸ್ಥ ಖಮರ್ ಬಜ್ವಾ ಕಾಲುಗಳು ನಡುಗುತ್ತಿತ್ತು. 2019ರ ಪಾಕ್​ ಸರ್ವಪಕ್ಷ ಸಭೆ ಬಗ್ಗೆ ಪಾಕಿಸ್ತಾನ ಮುಸ್ಲಿಂ ಲೀಗ್​-ಎನ್​ ನಾಯಕ ಅಯಾಜ್ ಸಾದಿಕ್​ ಮಾಹಿತಿ ಹಂಚಿಕೊಂಡಿದ್ದಾರೆ. ಅಂದು ನಡೆದ ಸಭೆಯಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್​ ಖುರೇಷಿ ಆತಂಕ ವ್ಯಕ್ತಪಡಿಸಿದ್ದರು.

ವಿಂಗ್ ಕಮಾಂಡರ್ ಅಭಿನಂದನ್​ನನ್ನು ಬಿಡುಗಡೆ ಮಾಡದಿದ್ರೆ ರಾತ್ರಿ 9 ಗಂಟೆಯೊಳಗೆ ಭಾರತ ದಾಳಿ ಮಾಡುತ್ತೆ ಎಂಬ ಆತಂಕ ಅವರಿಗಿತ್ತು.

ಹೀಗಾಗಿ ಇಮ್ರಾನ್ ಖಾನ್ ಸರ್ಕಾರವು ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ವರ್ಥಮಾನ್ ಅವರನ್ನು ಭಾರತಕ್ಕೆ ಮರಳಿ ಕಳಿಸಿತ್ತು ಎಂದಿದ್ದಾರೆ.

 


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ