ದೆಹಲಿ: ವಿಶ್ವ ಸೇರಿದಂತೆ ಇಡೀ ಭಾರತದ ಗಮನ ಸೆಳೆದಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ನನ್ನು ಬಿಡುಗಡೆ ಮಾಡುತ್ತಿರುವುದು ಶಾಂತಿಗಾಗಿ ಎಂದು ಹೇಳಿದ್ದ ಪಾಕಿಸ್ತಾನದ ನಿಜ ರೂಪ ಬಯಲಾಗಿದೆ. ಅಭಿನಂದನ್ ಬಿಡುಗಡೆಗೆ ಕಾರಣ ಬಯಲಾಗಿದೆ. ಭಾರತದ ಆ ಬಂದು ಮಾತಿಗೆ ಹೆದರಿ ಪಾಪಿ ಪಾಕಿಸ್ತಾನ ಬಾಲು ಮುದುಡಿಕೊಂಡಿತ್ತು.
ಅಭಿನಂದನ್ ಬಿಡುಗಡೆ ಮಾಡದಿದ್ರೆ ಭಾರತದಿಂದ ದಾಳಿ ಆಗುವ ಆತಂಕಕ್ಕೆ ಪಾಕ್ ಸೇನೆ ಮುಖ್ಯಸ್ಥ ಖಮರ್ ಬಜ್ವಾ ಕಾಲುಗಳು ನಡುಗುತ್ತಿತ್ತು. 2019ರ ಪಾಕ್ ಸರ್ವಪಕ್ಷ ಸಭೆ ಬಗ್ಗೆ ಪಾಕಿಸ್ತಾನ ಮುಸ್ಲಿಂ ಲೀಗ್-ಎನ್ ನಾಯಕ ಅಯಾಜ್ ಸಾದಿಕ್ ಮಾಹಿತಿ ಹಂಚಿಕೊಂಡಿದ್ದಾರೆ. ಅಂದು ನಡೆದ ಸಭೆಯಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಆತಂಕ ವ್ಯಕ್ತಪಡಿಸಿದ್ದರು.
ವಿಂಗ್ ಕಮಾಂಡರ್ ಅಭಿನಂದನ್ನನ್ನು ಬಿಡುಗಡೆ ಮಾಡದಿದ್ರೆ ರಾತ್ರಿ 9 ಗಂಟೆಯೊಳಗೆ ಭಾರತ ದಾಳಿ ಮಾಡುತ್ತೆ ಎಂಬ ಆತಂಕ ಅವರಿಗಿತ್ತು.
ಹೀಗಾಗಿ ಇಮ್ರಾನ್ ಖಾನ್ ಸರ್ಕಾರವು ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ವರ್ಥಮಾನ್ ಅವರನ್ನು ಭಾರತಕ್ಕೆ ಮರಳಿ ಕಳಿಸಿತ್ತು ಎಂದಿದ್ದಾರೆ.