Breaking News

ರೈಲ್ವೆ ಇಲಾಖೆ ಬೆಂಗಳೂರು ಹಾಗೂ ಮೈಸೂರು ನಡುವಿನ ರೈಲ್ವೆ ಹಳಿಯ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಿದೆ.

Spread the love

ನವದೆಹಲಿ: ರೈಲ್ವೆ ಇಲಾಖೆ ಬೆಂಗಳೂರು ಹಾಗೂ ಮೈಸೂರು ನಡುವಿನ ರೈಲ್ವೆ ಹಳಿಯ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಿದೆ. ಕಾಮಗಾರಿಯ ನೈಪುಣ್ಯತೆಯನ್ನು ನೀರು ತುಂಬಿದ ಗಾಜಿನ ಲೋಟದ ಮೂಲಕ ಪರೀಕ್ಷೆ ಮೂಲಕ ಅದು ಜನರ ಮುಂದಿಟ್ಟಿದೆ.

ಈ ವೇಳೆ ರೈಲು ವೇಗವಾಗಿ ಚಲಿಸಿದರೂ ಒಂದು ಹನಿ ನೀರು ಕೆಳಗೆ ಬಿದ್ದಿಲ್ಲ. ಈ ವಿಡಿಯೋವನ್ನು ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ಅವರು ಟ್ವೀಟ್‌ ಮಾಡಿದ್ದು, ಈ ಮಾರ್ಗ ರೈಲು ಪ್ರಯಾಣ ಎಷ್ಟು ಸುಗಮವಾಗಿ ಇರಲಿದೆ ಎಂಬುದನ್ನು ನೀವೇ ಊಹಿಸಿ ಹೇಳಿದ್ದಾರೆ.

ಕೊರೋನಾದ ನಡುವೆಯೂ ದೊಡ್ಡ ಶುಭ ಸಮಾಚಾರ ತಿಳಿಸಿದ ಪಿಯೂಶ್ ಗೋಯಲ್!

ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಬೆಂಗಳೂರು- ಮೈಸೂರು ನಡುವಿನ ರೈಲ್ವೆ ಮಾರ್ಗ ಹಾಗೂ ಸೇತುವೆಗಳ ದುರಸ್ತಿ ಕಾಮಗಾರಿಯನ್ನು ಲಾಕ್‌ಡೌನ್‌ ವೇಳೆ ಕೈಗೊಳ್ಳಲಾಗಿತ್ತು.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ