Breaking News

ರೈತರ ಹೋರಾಟದಲ್ಲಿ ಕಾರಿಗೆ ಬೆಂಕಿ : ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನ

Spread the love

ಹೊಸದಿಲ್ಲಿ: ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ರೈತರಿಗೆ ಸಹಾಯ ಮಾಡಲೆಂದು ತೆರಳಿದ ವ್ಯಕ್ತಿ ದಾರುಣ ಸಾವಿಗೀಡಾಗಿದ್ದಾನೆ.

ಕಾರಿನಲ್ಲಿ ಮಲಗಿದ್ದ ಸಮಯದಲ್ಲಿ ಕಾರಿಗೆ ಬೆಂಕಿ ತಗುಲಿದ್ದು, ಆತನ ಸಜೀವ ದಹನವಾಗಿದೆ. ಪಂಜಾಬ್ ನ ಬರ್ನಾಲಾ ಜಿಲ್ಲೆಯ ಧನೋಲುವಾ ಗ್ರಾಮದ ಜನಕರಾಜ್ (55) ಮೃತ ವ್ಯಕ್ತಿ.

ರೈತ ಹೋರಾಟಕ್ಕೆಂದು ಅಲ್ಲಿಂದ ದೆಹಲಿಗೆ ಬಂದಿದ್ದ. ಟ್ರ್ಯಾಕ್ಟರ್​ ಮೆಕಾನಿಕ್​ ಆಗಿದ್ದ ಆತನನ್ನು ಹೋರಾಟ ನಿರತ ರೈತರ ಟ್ರ್ಯಾಕ್ಟರ್​ಗಳನ್ನು ಸರಿ ಮಾಡಲೆಂದೇ ಕರೆಸಿಕೊಳ್ಳಲಾಗಿತ್ತು. ಶನಿವಾರ ರಾತ್ರಿ ತನ್ನ ಕೆಲಸ ಮುಗಿಸಿದ ಆತ ಕಾರಿನಲ್ಲಿ ನಿದ್ರೆಗೆ ಜಾರಿದ್ದಾನೆ. ಈ ಸಮಯದಲ್ಲಿ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಕಾರಿನಲ್ಲಿದ್ದ ಜನಕ ರಾಜ್​ ಅಲ್ಲಿಯೇ ಸಜೀವ ದಹನವಾಗಿದ್ದಾನೆ.


Spread the love

About Laxminews 24x7

Check Also

ಈ ಬಾರಿ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೆಡ್​​​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ

Spread the loveದೆಹಲಿ: ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಅವಕಾಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ