Breaking News

ದೇಶದಲ್ಲಿ ಕೊವಿಡ್ ಪ್ರಕರಣ ಸಂಬಂಧಿತ ಪ್ರಸ್ತುತ ಸ್ಥಿತಿಗತಿಯನ್ನು ಅವಲೋಕಿಸಲು ಪ್ರಧಾನಿ ಮೋದಿ

Spread the love

ದೆಹಲಿ: ದೇಶದಲ್ಲಿ ಕೊವಿಡ್ ಪ್ರಕರಣ ಸಂಬಂಧಿತ ಪ್ರಸ್ತುತ ಸ್ಥಿತಿಗತಿಯನ್ನು ಅವಲೋಕಿಸಲು ಪ್ರಧಾನಿ ಮೋದಿ ಇಂದು ಬೆಳಗ್ಗೆ 10.30ಕ್ಕೆ ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. ಕೊರೊನಾ ಕುರಿತು ಚರ್ಚಿಸಲು ಕರೆಯಲಾಗಿರುವ ಎರಡನೇ ಸರ್ವಪಕ್ಷ ಸಭೆ ಇದು. ಮೊದಲ ಸಭೆಯನ್ನು ಏಪ್ರಿಲ್​ 20ರಂದು ದೇಶವ್ಯಾಪಿ ಲಾಕ್​ಡೌನ್ ಬಗ್ಗೆ ಮಾತನಾಡಲು ಕರೆಯಲಾಗಿತ್ತು.

ದೀಪಾವಳಿ ನಂತರ ಕೊರೊನಾ ಪ್ರಕರಣಗಳಲ್ಲಿ ಉಂಟಾಗಿರುವ ಏರಿಳಿತ, ಚಳಿಗಾಲದ ಪರಿಣಾಮ, ಹೊಸವರ್ಷ, ಕ್ರಿಸ್​ಮಸ್​ ಸಂದರ್ಭದಲ್ಲಿ ರೂಪಿಸಬೇಕಾದ ನಿಯಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ನಿನ್ನೆಯಷ್ಟೇ ಪುಣೆ, ಅಹಮದಾಬಾದ್, ಹೈದರಾಬಾದ್​ನ ಔಷಧ ತಯಾರಿಕೆ ಕಂಪೆನಿಗಳಿಗೆ ಪ್ರಧಾನಿ ಭೇಟಿ ನೀಡಿದ್ದರು. ಆದ್ದರಿಂದ, ಸಭೆಯಲ್ಲಿ ಕೊರೊನಾ ಲಸಿಕೆಯ ಕುರಿತು ಚರ್ಚಿಸಬಹುದು ಎಂದು ಮೂಲಗಳು ತಿಳಿಸಿವೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

*ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: 8123967576
*Laxmi News*

 


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ