ಬಾಗಲಕೋಟೆ: ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಆಚರಿಸಲಾಯಿತು.
ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿ ಪುಷ್ಪಾರ್ಪಣೆ ಮಾಡಿ ಮಾತನಾಡಿದ ಪ್ರಾಧ್ಯಾಪಕ ಮಂಜುನಾಥ್ ಹಳ್ಳೂರ್ ಡಾ. ಬಿ. ಆರ್. ಅಂಬೇಡ್ಕರ್ ಅವರ ದೂರ ದೃಷ್ಟಿಯಿಂದ ಮೂಡಿಬಂದ ಸಂವಿಧಾನದ ಆಶಯಗಳಾದ ಸಮಾನತೆ, ಭ್ರಾತೃತ್ವ, ಜಾತ್ಯತೀತತೆಯನ್ನು ಪಾಲಿಸುವ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣ ಸಾಧ್ಯ, ಜಾತಿ ಮತ್ತು ಧರ್ಮದ ಆಚೆಗೆ ಕಾಣುವ ವ್ಯಕ್ತಿಗಳಲ್ಲಿ ಅಗ್ರಗಣ್ಯ ನಾಯಕರಾಗಿ ಮಹಾನ್ ಮಾನವತವಾದಿ ಅಂಬೇಡ್ಕರ್ ಕಾಣಿಸಿಕೊಂಡಿದ್ದಾರೆ ಎಂದರು.
ಪ್ರಾಚಾರ್ಯರಾದ ಶ್ರೀ. ಎಸ್. ಆರ್. ದೇಶಪಾಂಡೆ ಮಾತನಾಡಿ ಡಾ. ಬಿ ಆರ್. ಅಂಬೇಡ್ಕರ್ ಒಬ್ಬ ನಿಷ್ಠುರ ವ್ಯಕ್ತಿ ಆಗಿದ್ದರು, ಅವರ ಆದರ್ಶ ವಿಚಾರಗಳನ್ನು ನಾವು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡಾಗ ಜೀವನ ಸಾರ್ಥಕವಾಗುವುದು ಎಂದರು.
ಈ ವೇಳೆ ಪದವಿ ಪೂರ್ವ ಪ್ರಾಚಾರ್ಯರಾದ ಡಾ. ಎನ್. ಹೆಚ್. ಬೇವಿನಹಳ್ಳಿ, , ಡಾ. ಡಿ. ಎಸ್. ಲಮಾಣಿ, ಶಿವಾನಂದ ಶಿವನಗುತ್ತಿ, ಎಸ್. ಕೆ. ಜಾಹಾಗಿರದಾರ ಹಾಗೂ ಕಾಲೇಜಿನ ವಿವಿಧ ವಿಭಾಗದ ಪ್ರಾಧ್ಯಾಪಕರು ಹಾಜರಿದ್ದರು. ಉಪನ್ಯಾಸಕರಾದ ಪಲ್ಲವಿ ಬಿ. ನಿರೂಪಿಸಿ, ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಶಿವಾನಂದ ಶಿವನಗುತ್ತಿ ಅತಿಥಿಗಳನ್ನು ಸ್ವಾಗತಿಸಿ, ಪರಿಚಯಿಸಿದರು. ಉಪನ್ಯಾಸಕಿಯಾದ ಸೌಮ್ಯ ಸಾಲಿಮಠ ಪ್ರಾರ್ಥಿಸಿದರು, ಹಿಂದಿ ವಿಭಾಗದ ಮುಖ್ಯಸ್ಥರಾದ ಎಸ್. ಕೆ. ಜಹಗೀರದಾರ ವಂದಿಸಿದರು.
Laxmi News 24×7