Breaking News

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

Spread the love

ದಾವಣಗೆರೆ: ವಸತಿ ಶಾಲೆಗಳಿಗೆ 6 ನೇ ತರಗತಿಯ ಪ್ರವೇಶಕ್ಕಾಗಿ ಹೊರಡಿಸಲಾಗಿದ್ದ ಆನ್‍ಲೈನ್ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಸೆ.5 ರವರೆಗೆ ವಿಸ್ತರಿಸಲಾಗಿದೆ.

2020-21 ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇದರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ ಚೆನ್ನಮ್ಮ, ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಪರಿಶಿಷ್ಟ ಜಾತಿ/ಪಂಗಡ ವರ್ಗದ ಪ್ರತಿಭಾನ್ವಿತ ವಸತಿ ಶಾಲೆ, ಮಾಯಕೊಂಡ ವಸತಿ ಶಾಲೆಗಳಿಗೆ ಪ್ರವೇಶಕ್ಕೆ ಆ.25 ಕೊನೆಯ ದಿನವೆಂದು ನಿಗದಿಪಡಿಸಲಾಗಿತ್ತು. ಆದರೆ ಅಭ್ಯರ್ಥಿಗಳು ಹಾಗೂ ಪೋಷಕರ ಹಿತದೃಷ್ಟಿಯಿಂದ ದಿನಾಂಕ ವಿಸ್ತರಣೆ ಮಾಡಲಾಗಿದೆ.

5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಮೀಪದ ವಸತಿ ಶಾಲೆಗಳಲ್ಲಿ (ಕ್ವಾರಂಟೈನ್ ಸೆಂಟರ್/ಕೋವಿಡ್ ಕೇರ್ ಸೆಂಟರ್ ಹೊರತುಪಡಿಸಿ) ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿ, 2 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಶಾಲಾ ದೃಢೀಕರಣ ಪತ್ರ, ಶಾಲಾ ಎಸ್‍ಟಿಎಸ್ ನಂಬರ್ ಹಾಗೂ ವಿದ್ಯಾರ್ಥಿಯ ಮತ್ತು ತಂದೆಯ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬಹುದು.


Spread the love

About Laxminews 24x7

Check Also

ಕ್ಯಾನ್ಸರ್ ಪೀಡಿತನಿಂದ ವಿದ್ಯಾರ್ಥಿನಿ ಕೊಲೆ ಕೇಸ್​: ಪ್ರೀ ಪ್ಲ್ಯಾನ್ಡ್ ಮರ್ಡರ್ ರಹಸ್ಯ ಬಯಲು

Spread the loveಚಿತ್ರದುರ್ಗ, ಆಗಸ್ಟ್​ 21: ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಚೇತನ್​​ನಿಂದಲೇ ವಿದ್ಯಾರ್ಥಿನಿ (student) ವರ್ಷಿತಾ(19) ಕೊಲೆ (kill) ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಡಿವೈಎಸ್​ಪಿ ಪಿ.ದಿನಕರ್, ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ