Breaking News

ಹುಲ್ಲು ತರಲು ಅಡವಿಗೆ ಕರೆದೊಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ?

Spread the love

ದಾವಣಗೆರೆ: ಅಪ್ರಾಪ್ತೆಯೊಬ್ಬಳ ಮೇಲೆ ಆಕೆಯ ಸಂಬಂಧಿಕನೇ ಅತ್ಯಾಚಾರ ಎಸಗಿರುವ ಆರೋಪ ಜಿಲ್ಲೆಯ ಜಗಳೂರು ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ.

ಹುಲ್ಲು ತರಲು ಅಪ್ರಾಪ್ತೆಯನ್ನು ಅಡವಿಗೆ ಕರೆದುಕೊಂಡು ಹೋದ ಆಕೆಯ ಸಂಬಂಧಿಕ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಈ ವಿಷಯ ಮನೆಯಲ್ಲಿ ಹೇಳದಂತೆ ಆರೋಪಿ ಅಪ್ರಾಪ್ತೆಗೆ ಬೆದರಿಕೆ ಸಹ ಒಡ್ಡಿದ್ದಾನೆ ಎಂದು ಹೇಳಲಾಗಿದೆ.

ಈ ನಡುವೆ, ಬಾಲಕಿ ಅನಾರೋಗ್ಯದಿಂದ ಬಳಲಿದ್ದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು.

ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಜಗಳೂರು ಪೊಲೀಸರು ದೂರು ದಾಖಲಿಸಿಕೊಂಡು 23 ವರ್ಷದ ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಒಂದು ಸಾವಿರ ಪಿಎಸ್ಐ ಹುದ್ದೆ ಖಾಲಿ, ಶೀಘ್ರವೇ ನೇಮಕಾತಿ: ಸಚಿವ ಪರಮೇಶ್ವರ್

Spread the loveಕೊಪ್ಪಳ: ಪಿಎಸ್ಐ ನೇಮಕಾತಿ ಹಗರಣದ ಬಳಿಕ ಐದು ವರ್ಷಗಳ ಕಾಲ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ. ಒಂದು ಸಾವಿರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ